Webdunia - Bharat's app for daily news and videos

Install App

ವಾರಣಾಸಿಯಲ್ಲಿ ಪ್ರಧಾನಿ ಮೋದಿ ಕಾಣೆಯಾಗಿದ್ದಾರೆ ಎನ್ನುವ ಪೋಸ್ಟರ್ ಸಮರ

Webdunia
ಶನಿವಾರ, 19 ಆಗಸ್ಟ್ 2017 (19:54 IST)
ಉತ್ತರ ಪ್ರದೇಶದಲ್ಲಿ' ಕಾಣೆಯಾಗಿದ್ದಾರೆ ಎನ್ನುವ ಪೋಸ್ಟರ್ ಸಮರ ಮುಂದುವರಿದಿದ್ದರೂ ಅದನ್ನು ಲಗತ್ತಿಸಿದವರು ಯಾರು ಎನ್ನುವುದು ಯಕ್ಷ ಪ್ರಶ್ನೆಯಾಗಿಯೇ ಉಳಿದಿದೆ.
ಕಳೆದ ಕೆಲ ದಿನಗಳ ಹಿಂದೆ ರಾಯಬರೇಲಿ ಮತ್ತು ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾಣೆಯಾಗಿದ್ದಾರೆ ಎನ್ನುವ ಪೋಸ್ಟರ್‌ಗಳು ಕಂಡುಬಂದಿದ್ದವು. ಇದೀಗ ಪ್ರಧಾನಿ ಮೋದಿ ಕಾಣೆಯಾಗಿದ್ದಾರೆ ಎನ್ನುವ ಪೋಸ್ಟರ್‌ಗಳು ವಾರಣಾಸಿಯಲ್ಲಿ ಕಂಡು ಬರುತ್ತಿವೆ.
 
ಮೂಲಗಳ ಪ್ರಕಾರ, ಶುಕ್ರವಾರ ರಾತ್ರಿ ವಾರಣಾಸಿ ಪಟ್ಟಣದಲ್ಲಿರುವ ಕುಚೆರ್ರಿಯ ಪ್ರದೇಶದಲ್ಲಿರುವ ಕಟ್ಟಡಗಳ ಗೋಡೆಗಳ ಮೇಲೆ ಪ್ರಧಾನಿ ಮೋದಿ ಕಾಣೆಯಾಗಿದ್ದಾರೆ ಎನ್ನುವ ಹಲವಾರು ಪೋಸ್ಟರ್‌ಗಳು ಕಂಡು ಬಂದಿವೆ.
 
ಯಾವುದೇ ಹೆಸರನ್ನು ಹೊಂದಿರದ ಪೋಸ್ಟರ್‌ಗಳು, ಗಝಲ್ ಹಾಡುಗಾರ ಜಗ್‌ಜಿತ್ ಸಿಂಗ್ ಹಾಡಿದ 'ಘಝಲ್' ಹಾಡುಗಳನ್ನು ಪೋಸ್ಟರ್‌ಗಳಲ್ಲಿ ಉಲ್ಲೇಖಿಸಲಾಗಿದೆ. '' ಜಾನೇ ವೊ ಕೌನ್ ಸಾ ದೇಶ್ ಜಹಾ ತುಮ್ ಚೆಲೇ ಗಯೇ '' (ನೀವು ಯಾವ ರಾಷ್ಟ್ರಕ್ಕೆ ಹೋಗಿದ್ದೀರಿ ಎಂದು ತಿಳಿದಿಲ್ಲ), ಎನ್ನುವ ಹಾಡು ಹೊಂದಿರುವ ಪೋಸ್ಟರ್‌ಗಳಲ್ಲಿ ಮೋದಿ ಫೋಟೋ ಲಗತ್ತಿಸಲಾಗಿದೆ.
 
ಪೋಸ್ಟರ್‌ಗಳನ್ನು ಪತ್ತೆಹಚ್ಚಿದ ಬಳಿಕ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಂಡು ಅವುಗಳನ್ನು ತೆಗೆದುಹಾಕಿದೆ ಎಂದು ಮೂಲಗಳು ತಿಳಿಸಿವೆ. ಪೋಸ್ಟರ್‌ಗಳನ್ನು ಹಾಕಿದವರ ಪತ್ತೆಗಾಗಿ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.
 
ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ವಿಧಾನಸಭೆ ಉಪಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ತಮ್ಮ ಸ್ವಂತ ಕ್ಷೇತ್ರವಾದ ವಾರಣಾಸಿಗೆ ಆಗಮಿಸಿದ್ದನ್ನು ಸ್ಮರಿಸಬಹುದು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments