Webdunia - Bharat's app for daily news and videos

Install App

Varanasi Horror: ಯುವತಿಯೊಬ್ಬಳನ್ನು 7 ದಿನ ಕಟ್ಟಿಹಾಕಿ 23 ಮಂದಿಯಿಂದ ಗ್ಯಾಂಗ್‌ ರೇಪ್‌

Sampriya
ಸೋಮವಾರ, 7 ಏಪ್ರಿಲ್ 2025 (21:28 IST)
ವಾರಣಾಸಿ: ಯುವತಿಯೊಬ್ಬಳನ್ನು ಕಿಡ್ನ್ಯಾಪ್ ಮಾಡಿ 7 ದಿನಗಳಲ್ಲಿ ಆಕೆಯ ಮೇಲೆ 23 ಪುರುಷರು ನಿರಂತರ ಅತ್ಯಾಚಾರ ಎಸಗಿರುವ ಬೆಚ್ಚಿಬೀಳಿಸುವ ಘಟನೆ ಪಾಂಡೆಪುರ ಲಾಲ್ಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿ ನೀಡಿದ ದೂರಿನ ಆನುಸಾರ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.

ಏಪ್ರಿಲ್ 4ರಂದು ಮನೆಗೆ ವಾಪಾಸ್ಸಾದ ಯುವತಿ ತನ್ನ ಕುಟುಂಬಕ್ಕೆ ಘಟನೆಯ ಬಗ್ಗೆ ತಿಳಿಸಿದ್ದು, ನಂತರ ಅವರು ಪೊಲೀಸರನ್ನು ಸಂಪರ್ಕಿಸಿದ್ದಾರೆ.

ಪಾಂಡೆಪುರ ಲಾಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿರುವ ಮಹಿಳೆ ಮಾರ್ಚ್ 29 ರಂದು ನಾಪತ್ತೆಯಾಗಿದ್ದಾರೆ.ನನ್ನನ್ನು ಕಿಡ್ನ್ಯಾಪ್ ಮಾಡಿ 7ದಿನದಲ್ಲಿ 23ಮಂದಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿದ್ದಾರೆ.

ಡಿಸಿಪಿ ವರುಣಾ ವಲಯ, ಚಂದ್ರಕಾಂತ್ ಮಿನಾ ಅವರು, ಸಂತ್ರಸ್ತೆಯ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲಾ ಆರೋಪಿಗಳ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 70(1) (ಸಾಮೂಹಿಕ ಅತ್ಯಾಚಾರ), 74 (ಮಾನಸಿಕ ದೌರ್ಜನ್ಯ), 123 (ವಿಷ ಅಥವಾ ಹಾನಿಕಾರಕ ವಸ್ತು ನೀಡುವುದು), 126(2) (ಚಲನೆಗೆ ಅಡ್ಡಿಪಡಿಸುವುದು), 127(2) (ಅಕ್ರಮ ಬಂಧನ), ಮತ್ತು 351(2) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ.

ಪ್ರಾಥಮಿಕ ತನಿಖೆಯ ನಂತರ, ಆರು ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಹೆಚ್ಚಿನ ಕಾನೂನು ಔಪಚಾರಿಕತೆಗಳು ನಡೆಯುತ್ತಿವೆ ಎಂದು ಎಸಿಪಿ ಕ್ಯಾಂಟ್, ವಿದುಷ್ ಸಕ್ಸೇನಾ ಹೇಳಿದ್ದಾರೆ. ಇತರ ಆರೋಪಿಗಳನ್ನು ಬಂಧಿಸುವಲ್ಲಿ ಹೆಚ್ಚಿನ ತಂಡಗಳು ತೊಡಗಿವೆ.

ಮಾರ್ಚ್ 29 ರಂದು ತನ್ನ ಮಗಳು ಸ್ನೇಹಿತನ ಮನೆಗೆ ಹೋಗಿದ್ದಳು ಎಂದು ಹುಡುಗಿಯ ತಾಯಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹಿಂತಿರುಗುವಾಗ, ಆರೋಪಿಗಳಲ್ಲಿ ಒಬ್ಬನನ್ನು ಭೇಟಿಯಾದಳು, ಅವನು ಅವಳನ್ನು ಲಂಕಾದಲ್ಲಿರುವ ತನ್ನ ಕೆಫೆಗೆ ಕರೆದೊಯ್ದು ರಾತ್ರಿಯಿಡೀ ಆಕೆಯ ಮೇಲೆ  ಅತ್ಯಾಚಾರ ಮಾಡಿದನು.

ಮಾರ್ಚ್ 30 ರಂದು, ಅವಳು ರಸ್ತೆಯಲ್ಲಿ ಇನ್ನೊಬ್ಬ ಆರೋಪಿ ಮತ್ತು ಅವನ ಸ್ನೇಹಿತನನ್ನು ಭೇಟಿಯಾದಳು. ಅವರು ಅವಳನ್ನು ತಮ್ಮ ಮೋಟಾರ್‌ಸೈಕಲ್‌ನಲ್ಲಿ ಹೆದ್ದಾರಿಯ ಕಡೆಗೆ ಕರೆದೊಯ್ದು ಅತ್ಯಾಚಾರ ಮಾಡಿ ನಾಡೇಸರ್‌ನಲ್ಲಿ ಬಿಟ್ಟು ಹೋದರು ಎಂದು ದೂರಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ