Webdunia - Bharat's app for daily news and videos

Install App

ವಯನಾಡು ದುರಂತ: 150 ಕುಟುಂಬಕ್ಕೆ ನಾವೇ ಮನೆ ನಿರ್ಮಿಸುತ್ತೇವೆಂದ ಎನ್‌ಎಸ್‌ಎಸ್‌

Sampriya
ಶುಕ್ರವಾರ, 2 ಆಗಸ್ಟ್ 2024 (15:44 IST)
Photo Courtesy X
ಕೇರಳ: ವಯನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದಿಂದ ಮನೆ ಕಳೆದುಕೊಂಡ 150 ಕುಟುಂಬಗಳಿಗೆ ರಾಷ್ಟ್ರೀಯ ಸೇವಾ ಯೋಜನೆಯು(NSS) ಸ್ವಯಂಪ್ರೇರಿತರಾಗಿ ಮನೆಗಳನ್ನು ನಿರ್ಮಿಸಲಿದೆ ಎಂದು ಕೇರಳದ ಉನ್ನತ ಶಿಕ್ಷಣ ಇಲಾಖೆ ಸಚಿವ ಆರ್ ಬಿಂದು ಶುಕ್ರವಾರ ಹೇಳಿದ್ದಾರೆ.

ಕೇರಳದ ತ್ರಿಶೂರ್‌ನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಬಿಂದು ಅವರು, ರಾಷ್ಟ್ರೀಯ ಸೇವಾ ಯೋಜನೆಯು ಕೈಗೊಂಡಿರುವ ಅತಿದೊಡ್ಡ ಸ್ವಯಂಸೇವಕ ಚಟುವಟಿಕೆಗಳಲ್ಲಿ ಒಂದಾಗಿದೆ.

ಜುಲೈ 30 ರಂದು ವಯನಾಡಿನ ಚೂರಲ್ಮಲಾ ಮತ್ತು ಮುಂಡಕ್ಕೈನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ 200ಕ್ಕೆ ಏರಿಕೆಯಾಗಿದ್ದು, ಇನ್ನೂ 300ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಈ ದುರ್ಘಟನೆಯಲ್ಲಿ ವಯನಾಡು ತತ್ತರಿಸಿಹೋಗಿದ್ದು, ಜೀವಹಾನಿ ಜತೆಗೆ ಮನೆ ಹಾನಿಯಾಗಿವೆ.  

ರಾಜ್ಯ ರಾಷ್ಟ್ರೀಯ ಸೇವಾ ಯೋಜನೆಯ ವಿವಿಧ ಕೋಶಗಳ ಸಮನ್ವಯದೊಂದಿಗೆ ಮನೆಗಳ ನಿರ್ಮಾಣವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಹೇಳಿದರು.

"ಕೇರಳ ವಿಶ್ವವಿದ್ಯಾನಿಲಯಗಳ ಎನ್‌ಎಸ್‌ಎಸ್ ಘಟಕಗಳು, ಹೈಯರ್ ಸೆಕೆಂಡರಿ, ವೊಕೇಶನಲ್ ಹೈಯರ್ ಸೆಕೆಂಡರಿ, ತಾಂತ್ರಿಕ ಶಿಕ್ಷಣ ಇಲಾಖೆ, ಐಟಿಐ ಇತ್ಯಾದಿ, ಎನ್‌ಎಸ್‌ಎಸ್ ಮಾಜಿ ಕಾರ್ಯಕ್ರಮ ಸಂಯೋಜಕರು ಮತ್ತು ರಾಜ್ಯ ಅಧಿಕಾರಿಗಳು ಈ ದತ್ತಿ ಮಿಷನ್‌ನಲ್ಲಿ ಭಾಗವಹಿಸುತ್ತಾರೆ" ಎಂದು ಸಚಿವೆ ಬಿಂದು ಹೇಳಿದರು.

ಘಟನೆಯ ದಿನದಂದು ಪರಿಹಾರ ಕಾರ್ಯಾಚರಣೆಯಲ್ಲಿ ಎನ್‌ಎಸ್‌ಎಸ್/ಎನ್‌ಸಿಸಿ ಕಾರ್ಯಕರ್ತರ ಪಾಲ್ಗೊಳ್ಳುವಿಕೆಯನ್ನು ಅವರು ಎತ್ತಿ ತೋರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments