Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮುಂಬೈ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಎರಡೂ ರಾಜ್ಯಗಳಲ್ಲಿ ಉದ್ವಿಗ್ನಗೊಂಡಿರುವ ಹೊತ್ತಿನಲ್ಲೇ ಶಿವಸೇನಾ ನಾಯಕ ಹಾಗೂ ಸಂಸದ ಸಂಜಯ್ ರಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಭಾರತದ ಗಡಿಯೊಳಗೆ ಚೀನಾ ನುಸುಳಿದ ಮಾದರಿಯಲ್ಲೇ ನಾವು ಕೂಡ ಕರ್ನಾಟಕವನ್ನು ಪ್ರವೇಶಿಸುತ್ತೇವೆ ಎಂದು ಹೇಳಿದ್ದಾರೆ.
ಚೀನಾ ಎಂಟ್ರಿ ಕೊಟ್ಟಂತೆಯೇ ನಾವೂ ಕರ್ನಾಟಕವನ್ನು ಪ್ರವೇಶಿಸುತ್ತೇವೆ. ಈ ವಿಚಾರದಲ್ಲಿ ನಮಗೆ ಯಾರ ಅನುಮತಿಯೂ ಬೇಕಾಗಿಲ್ಲ ಎಂದು ತಿಳಿಸಿದ್ದಾರೆ.
ವಿವಾದವನ್ನು ಚರ್ಚೆಯ ಮೂಲಕ ಬಗೆಹರಿಸಲು ಬಯಸುತ್ತೇವೆ. ಆದರೆ ಕರ್ನಾಟಕದ ಸಿಎಂ ಬೆಂಕಿ ಹಚ್ಚುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ದುರ್ಬಲ ಸರ್ಕಾರವಿದೆ. ಗಡಿ ವಿವಾದದ ಕುರಿತು ಯಾವುದೇ ನಿಲುವು ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.