Webdunia - Bharat's app for daily news and videos

Install App

ಪುಲ್ವಾಮಾ ದಾಳಿಯ ಕರಾಳ ದಿನದಲ್ಲಿ ನಡೆದಿದ್ದೇನು?

Webdunia
ಮಂಗಳವಾರ, 14 ಫೆಬ್ರವರಿ 2023 (12:49 IST)
ನವದೆಹಲಿ : ಪ್ರತಿ ವರ್ಷ ಪ್ರೇಮಿಗಳ ದಿನವನ್ನಾಗಿ ಆಚರಿಸುವ ಪ್ರತಿಯೊಬ್ಬರಿಗೂ ಇದು ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಅನ್ನೋದು ಮತ್ತೆ ಮತ್ತೆ ನೆನಪಿಗೆ ಬರುತ್ತೆ. ಏಕೆಂದರೆ ಇದೇ ದಿನ 4 ವರ್ಷಗಳ ಹಿಂದೆ ಭಾರತೀಯ ಸೇನೆ ಭದ್ರತಾಪಡೆಗಳ ಮೇಲೆ ನಡೆದ ದಾಳಿಯಲ್ಲಿ 40 ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದರು.

ಇಡೀ ಭಾರತವೇ ಶೋಕಾಚರಣೆ ಆಚರಿಸಿ, ಮರುಕ ವ್ಯಕ್ತಪಡಿಸಿತ್ತು. ಈಗಲೂ ಪ್ರತಿ ವರ್ಷ ಫೆಬ್ರವರಿ 14, ಭಾರತೀಯರ ಪಾಲಿಗೆ ಮರೆಯಲಾಗದ ದಿನ, ಕರಾಳ ದಿನ ಎಂದೇ ಹೇಳಬಹುದು. ಹೌದು.. 4 ವರ್ಷಗಳ ಹಿಂದೆ ಫೆಬ್ರವರಿ 14 ರಂದು 40 ಸಿಆರ್ಪಿಎಫ್ ಅಧಿಕಾರಿಗಳು ಹುತಾತ್ಮರಾಗಿದ್ದರು. ಈ ಸುದ್ದಿ ಕೇಳಿ ಇಡೀ ಭಾರತವೇ ಶೋಕಸಾಗರದಲ್ಲಿ ಮುಳುಗಿತ್ತು. 

ಜೈಶ್-ಎ-ಮೊಹಮ್ಮದ್ ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ ಯೋಧರು ಕ್ಷಣಾರ್ಧದಲ್ಲಿ ಜೀವ ಕಳೆದುಕೊಂಡರು. ಸ್ಫೋಟಕ ತುಂಬಿದ ವಾಹನವನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಬೆಂಗಾವಲು ಪಡೆಯ ಮೇಲೆ ಭೀಕರವಾಗಿ ದಾಳಿ ನಡೆಸಲಾಗಿತ್ತು. ಈ ಕರಾಳ ಘಟನೆ ಇಂದು ನೆನಪಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸ್ಮರಿಸಿದ್ದಾರೆ.

ಈ ದಿನ ನಾವು ಪುಲ್ವಾಮಾದ್ಲಿ ನಮ್ಮ ಪರಾಕ್ರಮಿಗಳನ್ನು ಕಳೆದುಕೊಂಡಿದ್ದನ್ನು ನೆನಪಿಸಿಕೊಳ್ಳುತ್ತೇವೆ. ಅವರ ಅತ್ಯುನ್ನತ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ಅವರ ಧೈರ್ಯವು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮನ್ನು ಪ್ರೇರೇಪಿಸುತ್ತದೆ ಎಂದು ಮೋದಿ ಭಾವುಕ ಟ್ವೀಟ್ ಸಂದೇಶ ಹಂಚಿಕೊಂಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments