Webdunia - Bharat's app for daily news and videos

Install App

ದೆಹಲಿಯ ಶ್ರದ್ಧಾ ವಾಲ್ಕರ್ ಳನ್ನು ಪೀಸ್ ಪೀಸ್ ಮಾಡಿ ಫ್ರಿಡ್ಜ್ ನಲ್ಲಿಟ್ಟಿದ್ದ ಹಂತಕ ಅಫ್ತಾಬ್ ಈಗ ಎಲ್ಲಿದ್ದಾನೆ

Krishnaveni K
ಬುಧವಾರ, 8 ಮೇ 2024 (12:10 IST)
ನವದೆಹಲಿ: ಕಳೆದ ವರ್ಷ ಅತೀ ಹೆಚ್ಚು ಸದ್ದು ಮಾಡಿದ ಕ್ರೈಂ ಪ್ರಕರಣಗಳಲ್ಲಿ ದೆಹಲಿಯ ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣವೂ ಒಂದು. ಆಕೆಯ ಪ್ರಿಯಕರನೇ ಆಕೆಯನ್ನು ಹತ್ಯೆ ಮಾಡಿ ಪೀಸ್ ಪೀಸ್ ಮಾಡಿ ಫ್ರಿಡ್ಜ್ ನಲ್ಲಿ ತುಂಬಿಟ್ಟು ಬಳಿಕ ಒಂದೊಂದೇ ಬಾಡಿ ಪಾರ್ಟ್ ನ್ನು ಬಿಸಾಕುತ್ತಿದ್ದ.
 

ಈ ಬೆಚ್ಚಿ ಬೀಳಿಸುವ ಘಟನೆ ಇಡೀ ದೇಶದಲ್ಲೇ ತಲ್ಲಣವುಂಟು ಮಾಡಿತ್ತು. ಈ ಸಂಬಂಧ ಆರೋಪಿ ಅಫ್ತಾಬ್ ಅಮಿನ್ ಪೂನವಾಲಾನನ್ನು ಪೊಲೀಸರು ಬಂಧಿಸಿದ್ದರು. ಶ್ರದ್ಧಾ ಜೊತೆಗೆ ಲಿವಿಂಗ್ ರಿಲೇಷನ್ ಶಿಪ್ ನಲ್ಲಿದ್ದ ಆತ ಕೊನೆಗೆ ಆಕೆಯ ಮೇಲೆ ಸಂಶಯಪಟ್ಟು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದ.

ಬಳಿಕ ಮೃತದೇಹವನ್ನು ಪೀಸ್ ಪೀಸ್ ಮಾಡಿ ಮನೆಯಲ್ಲಿಯೇ 15 ದಿನಗಳ ಕಾಲ ಇಟ್ಟುಕೊಂಡಿದ್ದ. ಪ್ರತಿನಿತ್ಯ ಯಾರಿಗೂ ಸಂಶಯ ಬಾರದಂತೆ ಒಂದೊಂದೇ ಪೀಸ್ ನ್ನು ದೆಹಲಿಯ ನಿರ್ಜನ ಪ್ರದೇಶಕ್ಕೆ ತೆಗೆದುಕೊಂಡು ಹೋಗಿ ಬಿಸಾಕಿ ಬರುತ್ತಿದ್ದ. ಈ ಘಟನೆ ಬೆಳಕಿಗೆ ಬೆನ್ನಲ್ಲೇ ಪೊಲೀಸರು ಆತನನ್ನು ಬಂಧಿಸಿದ್ದರು.

ಕೊಲೆಯಾಗಿದ್ದ ಯುವತಿ ಹಿಂದೂ ಮತ್ತು ಕೊಲೆ ಮಾಡಿದಾತ ಮುಸ್ಲಿಂ ಧರ್ಮಕ್ಕೆ ಸೇರಿದವನಾಗಿದ್ದ. ಹೀಗಾಗಿ ಈ ಕೊಲೆ ಪ್ರಕರಣ ಮತ್ತಷ್ಟು ದೊಡ್ಡ ಸುದ್ದಿಯಾಗಿತ್ತು. ಇದೊಂದು ಲವ್ ಜಿಹಾದ್ ಪ್ರಕರಣ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಎಲ್ಲಾ ಘಟನೆಯಂತೇ ಇದೀಗ ಈ ಪ್ರಕರಣವೂ ತೆರೆಮರೆಗೆ ಸರಿಯುತ್ತಿದೆ.

ಆದರೆ ಹಂತಕ ಅಫ್ತಾಬ್ ಈಗ ಎಲ್ಲಿದ್ದಾನೆ? ಈ ಕೇಸ್ ಎಲ್ಲಿಯವರೆಗೆ ಬಂದಿದೆ ಎಂದು ಗೊತ್ತಾ? ಹಂತಕ ಅಫ್ತಾಬ್ ಈಗಲೂ  ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಒಂಟಿ ಕೋಣೆಯಲ್ಲಿ ಆತ ಜೈಲಿನಲ್ಲಿ ತನ್ನ ದಿನ ಕಳೆಯುತ್ತಿದ್ದಾನೆ. ತೀರಾ ಇತ್ತೀಚೆಗಷ್ಟೇ ಆತನ ವಕೀಲರ ಮನವಿ ಮೇರೆಗೆ ಕೋರ್ಟ್ ಹಗಲು 8 ಗಂಟೆ ಹೊತ್ತು ಜೈಲಿನಲ್ಲಿ ಓಡಾಡಿಕೊಂಡಿರಲು ಅವಕಾಶ ನೀಡಲಾಗಿದೆ. ರಾತ್ರಿಯಿಡೀ ಮತ್ತೆ ಆತನನ್ನು ಒಂಟಿ ಸೆಲ್ ನಲ್ಲಿ ಕೂಡಿ ಹಾಕಲಾಗುತ್ತಿದೆ.  ಜೈಲಿನಲ್ಲಿ ಇದುವರೆಗೆ ಆತ ಶಾಂತ ರೀತಿಯಲ್ಲೇ ವರ್ತಿಸಿದ್ದಾನೆ ಎಂಬ ಕಾರಣಕ್ಕೆ ಆತನಿಗೆ ಈ ಅವಕಾಶ ನೀಡಲಾಗಿದೆ. ದೆಹಲಿ ಪೊಲೀಸರು ಆತನ ವಿರುದ್ಧ 6,629  ಪುಟಗಳ ಸುದೀರ್ಘ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments