Webdunia - Bharat's app for daily news and videos

Install App

Tahawwur Rana: ಮುಂಬೈ ಮೇಲೆ ದಾಳಿ ನಡೆಸಿದ ಬಳಿಕ ಉಗ್ರ ತಹವ್ವೂರ್ ರಾಣಾ ಹೇಳಿದ್ದ ಮಾತು ತಿಳಿದರೆ ರಕ್ತ ಕುದಿಯುತ್ತದೆ

Krishnaveni K
ಶುಕ್ರವಾರ, 11 ಏಪ್ರಿಲ್ 2025 (17:10 IST)
ನವದೆಹಲಿ: 2008 ರಲ್ಲಿ ಮುಂಬೈ ಮೇಲೆ ದಾಳಿ ನಡೆಸಿದ ಬಳಿಕ ಉಗ್ರ ತಹವ್ವೂರ್ ರಾಣಾ ತನ್ನ ಸಹಚರ ರಿಚರ್ಡ್ ಹ್ಯಾಡ್ಲೀಗೆ ಹೇಳಿದ್ದ ಮಾತು ಕೇಳಿದರೆ ನಿಮ್ಮ ರಕ್ತ ಕುದಿಯುತ್ತದೆ.

ಕೆನಡಾ ಪ್ರಜೆ, ಪಾಕಿಸ್ತಾನದ ಮಾಜಿ ಸೇನಾ ವೈದ್ಯ ರಾಣಾನನ್ನು ಅಮೆರಿಕಾ ಗಡೀಪಾರು ಮಾಡಿದ್ದು ಈಗ ಆತ ಭಾರತದ ಎನ್ಐಎ ವಶದಲ್ಲಿದ್ದಾನೆ. ನಿನ್ನೆ ಆತ ಅಮೆರಿಕಾದಿಂದ ಭಾರತಕ್ಕೆ ಬಂದಿಳಿದಿದ್ದಾನೆ. ತಕ್ಷಣವೇ ಆತನ ವಿಚಾರಣಾ ಪ್ರಕ್ರಿಯೆ ಶುರುವಾಗಿದೆ.

ಅಮೆರಿಕಾದ ಕಾನೂನು ವ್ಯವಹಾರಗಳ ವಿಭಾಗದ ಅಧಿಕಾರಿಯೊಬ್ಬರು ಹೇಳಿದ ಪ್ರಕಾರ ಆತ ಮುಂಬೈ ದಾಳಿ ಬಳಿಕ ತನ್ನ ಸಹಚರ ಹ್ಯಾಡ್ಲಿಗೆ ‘ಭಾರತೀಯರು ಈ ದಾಳಿಗೆ ಅರ್ಹರಾಗಿದ್ದರು. ಅವರಿಗೆ ಹಾಗೇ ಆಗಬೇಕಿತ್ತು’ ಎಂದಿದ್ದನಂತೆ. ಅಲ್ಲದೆ, ಈ ದಾಳಿ ವೇಳೆ ಹತ್ಯೆಗೀಡಾದ ಲಷ್ಕರ್ ಉಗ್ರರಿಗೆ ಪಾಕಿಸ್ತಾನದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಬೇಕು ಎಂದಿದ್ದನಂತೆ.

2008 ರಲ್ಲಿ ನಡೆದ ಮುಂಬೈ ಉಗ್ರ ದಾಳಿಯಲ್ಲಿ 166 ಮಂದಿ ಪ್ರಾಣ ಕಳೆದುಕೊಂಡಿದ್ದರು. ಭದ್ರತಾ ಸಿಬ್ಬಂದಿಗಳು 9 ಉಗ್ರರನ್ನು ಹೊಡೆದುರುಳಿಸಿದ್ದರು. ಈ ದಾಳಿಯ ಪ್ರಮುಖ ರೂವಾರಿಗಳೆಂದರೆ ಹ್ಯಾಡ್ಲಿ ಮತ್ತು ರಾಣಾ. ಇದೀಗ ರಾಣಾನನ್ನು ಭಾರತದ ಎನ್ಐಎ ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

ಮುಂದಿನ ಸುದ್ದಿ
Show comments