Webdunia - Bharat's app for daily news and videos

Install App

Tahawwur Rana: ಗಡೀಪಾರಾಗಿ ಭಾರತಕ್ಕೆ ಬಂದಿಳಿದ ಉಗ್ರ ತಹವ್ವೂರ್ ರಾಣಾ ಹಿನ್ನಲೆಯೇನು

Krishnaveni K
ಗುರುವಾರ, 10 ಏಪ್ರಿಲ್ 2025 (16:48 IST)
ನವದೆಹಲಿ: 2008 ರಲ್ಲಿ ಮುಂಬೈಯಲ್ಲಿ ನಡೆದಿದ್ದ ಉಗ್ರ ದಾಳಿಯ ರೂವಾರಿಯಾಗಿದ್ದ ಉಗ್ರ ತಹವ್ವೂರ್ ಅಮೆರಿಕಾದಿಂದ ಗಡೀಪಾರಾಗಿ ಈಗ ಭಾರತಕ್ಕೆ ಕರೆತರಲಾಗಿದೆ. ಈತ ನಿಜಕ್ಕೂ ಯಾರು, ಈತನ ಹಿನ್ನಲೆಯೇನು ನೋಡಿ.

ತಹವ್ವೂರ್ ರಾಣಾ ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ. ಪಾಕಿಸ್ತಾನ ಸೇನೆಯಲ್ಲಿ ವೈದ್ಯನಾಗಿಯೂ ಸೇವೆ ಸಲ್ಲಿಸಿದ್ದ. ಈತ ಲಷ್ಕರ್ ಇ ತೈಬಾ ಸಂಘಟನೆಯ ಸಕ್ರಿಯ ಸದಸ್ಯ. 1990 ರಲ್ಲಿ ಈತ ಕೆನಡಾಕ್ಕೆ ವಲಸೆ ಹೋಗಿದ್ದ. ಕೆನಡಾ ನಾಗರಿಕತ್ವ ಪಡೆದುಕೊಂಡ ಬಳಿಕ ಶಿಕಾಗೋಗೆ ಶಿಫ್ಟ್ ಆಗಿದ್ದ.

ಮುಂಬೈ ದಾಳಿಗೆ ಮುನ್ನ ಹಲವು ಬಾರಿ ಈತ ಭಾರತಕ್ಕೂ ಭೇಟಿ ನೀಡಿದ್ದಾನೆ. ಇಲ್ಲಿನ ವಾತಾವರಣಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದಾನೆ. ಮುಂಬೈ ದಾಳಿ ಮಾಸ್ಟರ್ ಮೈಂಡ್ ಗಳಲ್ಲಿ ಒಬ್ಬಾತ ರಾಣಾ ಆಗಿದ್ದರೆ ಇನ್ನೊಬ್ಬಾತ ಡೇವಿಡ್ ಹೆಡ್ಲಿ. ಮುಂಬೈ ಮೇಲೆ ನಡೆಸಲು ಯೋಜನೆ ರೂಪಿಸಿದ್ದು, ಬೇಕಾದ ಸಾಮಗ್ರಿಗಳನ್ನು ಒದಗಿಸಿದ್ದು ಎಲ್ಲವೂ ಇವರಿಬ್ಬರೇ. ಅಮೆರಿಕಾದಲ್ಲಿ ನೆಲೆಸಿದ್ದ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಹಲವು ಸಮಯದಿಂದ ಭಾರತ ಬೇಡಿಕೆಯಿಡುತ್ತಲೇ ಇತ್ತು.

ಇದೀಗ ಅದರಲ್ಲಿ ಯಶಸ್ವಿಯಾಗಿದೆ. ಈಗ ಎನ್ಐಎ ಉಗ್ರ ರಾಣಾನನ್ನು ಭಾರತಕ್ಕೆ ಕರೆತಂದಿದೆ. ಇದೀಗ ಮುಂಬೈ ದಾಳಿ ವಿಚಾರವಾಗಿ ಆತನ ವಿಚಾರಣೆ ನಡೆಸಿ ಶಿಕ್ಷೆ ಕೊಡಿಸಲು ಎನ್ಐಎ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments