Webdunia - Bharat's app for daily news and videos

Install App

ಯಾವಾಗ್ಲೂ ಬಿಳಿ ಶರ್ಟ್ ನ್ನೇ ತೊಡುವುದು ಯಾಕೆ? ರಾಹುಲ್ ಗಾಂಧಿ ಉತ್ತರ

Krishnaveni K
ಸೋಮವಾರ, 6 ಮೇ 2024 (12:30 IST)
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಎಲ್ಲೇ ಹೋಗುವುದಿದ್ದರೂ ಬಿಳಿ ಟಿ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸುತ್ತಾರೆ. ಅವರ ಡ್ರೆಸ್ ಕೋಡ್ ಯಾಕೆ ಹೀಗಿರುತ್ತದೆ ಎಂಬುದಕ್ಕೆ ಅವರು ಉತ್ತರ ನೀಡಿದ್ದಾರೆ.

ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಒಳಗೊಂಡ ರಾಪಿಡ್ ಫಯರ್ ಪ್ರಶ್ನೋತ್ತರಾವಳಿಯಲ್ಲಿ ರಾಹುಲ್ ಗಾಂಧಿಗೆ ನೀವು ಯಾಕೆ ಯಾವತ್ತೂ ಬರೀ ಬಿಳಿ ಬಣ್ಣದ ಟಿ ಶರ್ಟ್ ತೊಟ್ಟುಕೊಂಡು ಸಿಂಪಲ್ ಆಗಿರುತ್ತೀರಿ ಎಂದು ಪ್ರಶ್ನೆ ಕೇಳಲಾಯಿತು.

ಇದಕ್ಕೆ ಉತ್ತರಿಸಿದ ಅವರು ನನಗೆ ಸಿಂಪಲ್ ಆಗಿರಲು ಇಷ್ಟ. ಬಿಳಿ ಬಣ್ಣ ಪಾರದರ್ಶಕತೆ ಮತ್ತು ಪ್ರಾಮಾಣಿಕತೆಯನ್ನು ಸೂಚಿಸುತ್ತದೆ. ನನಗೆ ಬಟ್ಟೆ ಯಾವುದು ಎಂಬುದು ಮುಖ್ಯವಲ್ಲ’ ಎಂದಿದ್ದಾರೆ. ಇನ್ನು ಮಲ್ಲಿಕಾರ್ಜುನ ಖರ್ಗೆಗೆ ಈ ಚುನಾಣೆ ಪ್ರಚಾರ ಸಂದರ್ಭದಲ್ಲಿ ಯಾವುದು ಉತ್ತಮ ಮತ್ತು ಏನು ಕೆಟ್ಟದ್ದು ಎನಿಸಿತು ಎಂದು ಪ್ರಶ್ನೆ ಕೇಳಿದಾಗ ಕೆಟ್ಟದ್ದು ಎಂದು ಏನೂ ಇಲ್ಲ. ನಾವು ಈ ದೇಶಕ್ಕೋಸ್ಕರ ಕೆಲಸ ಮಾಡುತ್ತಿದ್ದೇವೆ ಎಂಬುದು ಉತ್ತಮ ವಿಚಾರ. ಈ ದೇಶವನ್ನು ಹಾಳು ಮಾಡುತ್ತಿರುವವರ ವಿರುದ್ಧ ಹೋರಾಡುತ್ತಿದ್ದೇವೆ. ನಮಗೆ ಪಕ್ಷಕ್ಕಿಂತ ಸಿದ್ಧಾಂತ ಮುಖ್ಯ. ಸೋಲು ಗೆಲುವು, ಬರುತ್ತದೆ ಹೋಗುತ್ತದೆ, ಆದರೆ ಕೊನೆಗೆ ನಮ್ಮ ಸಿದ್ಧಾಂತ್ ಉಳಿಸುವುದು ಮುಖ್ಯ ಎಂದಿದ್ದಾರೆ.

ಇದಕ್ಕೆ ರಾಹುಲ್ ಗಾಂಧಿಯೂ ತಲೆದೂಗಿದ್ದಾರೆ. ಎಲ್ಲಕ್ಕಿಂತ ಸಿದ್ದಾಂತ ಮುಖ್ಯ ಎನ್ನುವ ಖರ್ಗೆಯವರು ಮತ್ತು ಸಿದ್ದರಾಮಯ್ಯನವರ ಮಾತಿಗೆ ನಾನು ಒಪ್ಪುತ್ತೇನೆ. ಎಷ್ಟೇ ದೊಡ್ಡ ಸಂಘಟನೆಯಾದರೂ ಸಿದ್ಧಾಂತವಿಲ್ಲದೇ ಯಶಸ್ಸು ಕಾಣಲು ಸಾಧ‍್ಯವಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments