Publish Date: Thu, 06 Jul 2023 (07:08 IST)
Updated Date: Thu, 06 Jul 2023 (08:48 IST)
ನವದೆಹಲಿ : ಮಹಾರಾಷ್ಟ್ರದ ರಾಜಕೀಯ ಕ್ಷಿಪ್ರ ಬೆಳವಣಿಗೆಯಲ್ಲಿ ಎನ್ಸಿಪಿ ನಾಯಕ ಅಜಿತ್ ಪವಾರ್ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸರ್ಕಾರಕ್ಕೆ ಬೆಂಬಲ ನೀಡಿ ಉಪ ಮುಖ್ಯಮಂತ್ರಿಯಾದ ಬಳಿಕ ದೇಶದಲ್ಲಿ ಹೊಸ ರಾಜಕೀಯ ಚರ್ಚೆ ಶುರುವಾಗಿದೆ.
ಹಲವು ರಾಜ್ಯಗಳಲ್ಲಿ ಇದೇ ರೀತಿಯ ಬೆಳವಣಿಗೆಯಾಗಬಹುದು ಎಂದು ಅಂದಾಜಿಸಲಾಗಿದೆ. ಮಹಾರಾಷ್ಟ್ರದ ಬೆನ್ನಲ್ಲೇ ಬಿಹಾರದಲ್ಲೂ ಇದೇ ರೀತಿಯ ಬೆಳವಣಿಗೆಯಾಗಬಹುದು ಎನ್ನಲಾಗುತ್ತಿದೆ.
ಬಿಜೆಪಿ ಸಾಂಗತ್ಯ ಬಿಟ್ಟು ಆರ್ಜೆಡಿ ಜೊತೆಗೂಡಿ ಸರ್ಕಾರ ರಚಿಸಿರುವ ಜೆಡಿಯು ಮುಖ್ಯಸ್ಥ, ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೆ ಕಮಲದ ಕೈ ಹಿಡಿಯಬಹುದು ಎನ್ನಲಾಗುತ್ತಿದೆ. ಇದಕ್ಕೆ ಪೂರಕ ಎನ್ನುವಂತೆ ಹಲವು ಬೆಳವಣಿಗೆ ನಡೆದಿವೆ.