Webdunia - Bharat's app for daily news and videos

Install App

ಬಿಜೆಪಿ-ಆರೆಸ್ಸೆಸ್ ಸದಸ್ಯರನ್ನು ಕೆಣಕಿದ್ರೆ ಕಣ್ಣುಗಳನ್ನು ಕೀಳುತ್ತೇವೆ: ಬಿಜೆಪಿ ನಾಯಕಿ

Webdunia
ಸೋಮವಾರ, 16 ಅಕ್ಟೋಬರ್ 2017 (16:14 IST)
ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರ ಮೇಲೆ ಸಿಪಿಐ-ಎಂ ಕಾರ್ಯಕರ್ತರು ದೌರ್ಜನ್ಯ ಮುಂದುವರಿಸಿದಲ್ಲಿ ಅವರ ಮನೆಗಳಿಗೆ ನುಗ್ಗಿ ಕಣ್ಣು ಕೀಳುತ್ತೇವೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸರೋಜ್ ಪಾಂಡೆ ಗುಡುಗಿದ್ದಾರೆ.
ಪಶ್ಚಿಮ ಬಂಗಾಳ ಮತ್ತು ಕೇರಳ ರಾಜ್ಯಗಳಲ್ಲಿ ಬಿಜೆಪಿ-ಆರೆಸ್ಸೆಸ್ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಹಲ್ಲೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಿಪಿಐ-ಎಂ ಕಾರ್ಯಕರ್ತರು ಮತ್ತೆ ದೌರ್ಜನ್ಯಕ್ಕೆ ಮುಂದಾದಲ್ಲಿ ನಾವು ಅವರ ಮನೆಗಳಿಗೆ ನುಗ್ಗಿ ಅವರ ಕಣ್ಣನ್ನು ತೆಗೆದುಹಾಕುತ್ತೇವೆ ಎಂದು ಎಚ್ಚರಿಸಿದ್ದಾರೆ.
 
"ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತವೂ ನಾವು 11 ಕೋಟಿ ಸದಸ್ಯರನ್ನು ಹೊಂದಿದ್ದೇವೆ ಮತ್ತು ಕೇರಳದಲ್ಲಿ ವಿವಿಧ ವಯೋಮಾನದ ನಮ್ಮ 300 ಕ್ಕೂ ಹೆಚ್ಚು ಸದಸ್ಯರು ಹತ್ಯೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.
 
ಪ್ರಜಾಪ್ರಭುತ್ವದ ಹತ್ಯೆಯಾದರೆ ಅದು ನಮಗೆ ದೊಡ್ಡ ವಿಷಯವಲ್ಲ. ನಾವು ದೇಶವನ್ನು ಆಳುತ್ತಿದ್ದೇವೆ. ಮತ್ತು ನಾವು ಬಯಸಿದರೆ ಕೇರಳ ಸರಕಾರವನ್ನು ವಜಾ ಮಾಡಬಹುದು. ಆದರೆ, ಪ್ರಜಾಪ್ರಭುತ್ವ ಮತ್ತು ಕೇರಳದ ಸರ್ಕಾರದ ಮೇಲೆ ನಂಬಿಕೆ ಹೊಂದಿದ್ದೇವೆ. ಪಶ್ಚಿಮ ಬಂಗಾಳವು ಅದಕ್ಕೆ ಅನುಗುಣವಾಗಿ ಕೆಲಸ ಮಾಡಬೇಕು, ಮಮತಾ ಬ್ಯಾನರ್ಜಿ ಯಾವುದೇ ರಾಜಕೀಯ ಪಕ್ಷಪಾತದಿಂದ ಕೆಲಸ ಮಾಡಬಾರದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸರೋಜ್ ಪಾಂಡೆ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments