Webdunia - Bharat's app for daily news and videos

Install App

ಅನೈತಿಕ ಸಂಬಂಧಕ್ಕೆ ಅಡ್ಜಿಯಾದ ಪತಿ, 3 ಮಕ್ಕಳನ್ನು ಹತ್ಯೆಗೈದ ಮಹಿಳೆ

Webdunia
ಶನಿವಾರ, 28 ಅಕ್ಟೋಬರ್ 2017 (14:01 IST)
ಅನೈತಿಕ ಸಂಬಂಧಕ್ಕೆ ಅಡ್ಡಿಯಾದ 46 ವರ್ಷ ವಯಸ್ಸಿನ ಪತಿ ಮತ್ತು ಮೂವರು ಮಕ್ಕಳನ್ನು ತನ್ನ ಪ್ರೇಮಿಯ ಸಹಾಯದಿಂದ ಹತ್ಯೆಗೈದ 36 ವರ್ಷ ವಯಸ್ಸಿನ ಕಾಮಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಸಂತೋಷ್ ಎನ್ನುವ ಮಹಿಳೆ 1999ರಲ್ಲಿ ತನಗಿಂತ 10 ವರ್ಷ ಹಿರಿಯನಾದ ಭಂವರಿ ಶರ್ಮಾ ಎಂಬಾತನೊಂದಿಗೆ ವಿವಾಹವಾಗಿದ್ದಳು. ಶರ್ಮಾ ಸದಾ ತನ್ನ ಉದ್ಯೋಗದಲ್ಲಿ ಬಿಜಿಯಾಗಿದ್ದರಿಂದ ಪತ್ನಿ ಸಂತೋಷ್‌‌ ತನ್ನ ಪ್ರೇಮವನ್ನು ಬೇರೆಯವರೊಂದಿಗೆ ಹಂಚಿಕೊಳ್ಳುವ ಪರಿಸ್ಥಿತಿ ಎದುರಾಗಿತ್ತು.
 
ಸಂತೋಷ್ ಸಮಯವನ್ನು ಕಳೆಯಲು ನೆರೆಮನೆಯಲ್ಲಿ ವಾಸವಾಗಿದ್ದ ವಿದ್ಯಾರ್ಥಿ ಹನುಮಾನ್ ಪ್ರಸಾದ್‌ ಎಂಬಾತನೊಂದಿಗೆ ಗೆಳೆತನ ಬೆಳೆಸಿದ್ದಳು. ನಂತರ ಗೆಳೆತನ ಅನೈತಿಕ ಸಂಬಂಧಕ್ಕೆ ತಿರುಗಿತು. ಇಬ್ಬರ ಅನೈತಿಕ ಸಂಬಂಧ ಪತಿ ಮತ್ತು ಹಿರಿಯ ಮಗನಿಗೆ ತಿಳಿದ ನಂತರ ಆಕೆಯನ್ನು ಹನುಮಾನ್‌ನನ್ನು ಭೇಟಿ ಮಾಡದಂತೆ ತಾಕೀತು ಮಾಡಿದ್ದರು ಎನ್ನಲಾಗಿದೆ. 
 
ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿ ಮತ್ತು ಪುತ್ರನ ವಿರುದ್ಧ ಆಕ್ರೋಶಗೊಂಡ ಸಂತೋಷ್, ಅವರ ಹತ್ಯೆಗೆ ಸ್ಕೇಚ್ ಹಾಕಿದ್ದಾಳೆ. ಅವರ ಹತ್ಯೆಯ ನಂತರ ಎಲ್ಲಾ ಸಮಯವನ್ನು ಹನುಮಾನ್‌ನೊಂದಿಗೆ ಕಳೆಯಬಹುದು ಎಂದು ಯೋಜನೆ ರೂಪಿಸಿದ್ದಾಳೆ. 
 
ಹತ್ಯೆಯ ದಿನ ಸಂತೋಷ್, ಆಹಾರದಲ್ಲಿ ನಿದ್ರೆ ಮಾತ್ರೆ ಬೆರೆಸಿ ಪತಿ ಮತ್ತು ಮಕ್ಕಳಿಗೆ ನೀಡಿದ್ದಾಳೆ. ಎಲ್ಲರು ದೀರ್ಘನಿದ್ರೆಗೆ ತಲುಪಿದಾಗ, ಮೂವರು ಸುಪಾರಿ ಕಿಲ್ಲರ್‌ರನ್ನು ಕರೆಸಿ ಹತ್ಯೆ ಮಾಡಿಸಿದ್ದಾಳೆ. 
 
ಹತ್ಯೆಯ ನಂತರ ಸಂತೋಷ್,  ಹಂತಕರಿಗೆ 60 ಸಾವಿರ ರೂಪಾಯಿ ಮತ್ತು ಸ್ಕೂಟಿ ಕೀ ಉಡುಗೊರೆಯಾಗಿ ನೀಡಿದ್ದಾಳೆ. ಸ್ಕೂಟಿಯಲ್ಲಿ ಮೂವರು ಹಂತಕರು ನೇರವಾಗಿ ಹತ್ತಿರದ ರೈಲ್ವೆ ನಿಲ್ದಾಣಕ್ಕೆ ತೆರಳಿ ಅಲ್ಲಿ ಸ್ಕೂಟಿ ಮತ್ತು ಹತ್ಯೆಗೆ ಬಳಸಿದ ಆಯುಧಗಳನ್ನು ಬಿಟ್ಟು ತೆರಳಿದ್ದಾರೆ.
 
ರೈಲ್ವೆ ನಿಲ್ದಾಣದಲ್ಲಿ ಹಂತಕರು ರೈಲಿಗಾಗಿ ಕಾದಿದ್ದಾರೆ. ಆದರೆ, ರೈಲು ಬಾರದಿದ್ದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳು ಅಟೋದಲ್ಲಿ ಬೇರೆ ಬೇರೆ ಸ್ಥಳಗಳಿಗೆ ತೆರಳಿದ್ದಾರೆ. ಪೊಲೀಸರು ಮಹಿಳೆ ಸಂತೋಷ್‌‌ಗೆ ಬೆತ್ತದ ರುಚಿ ತೋರಿಸಿದ ಕೂಡಲೇ ಹತ್ಯೆಯ ಬಗ್ಗೆ ಬಾಯಿ ಬಿಟ್ಟಿದ್ದಾಳೆ. ಕೂಡಲೇ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

ಮುಂದಿನ ಸುದ್ದಿ