Webdunia - Bharat's app for daily news and videos

Install App

ಪರಿಸರ ಮಾಲಿನ್ಯದ ಬಗ್ಗೆ ಚಿಂತಿಸಬೇಕು, ಹಬ್ಬಕ್ಕೆ ಸಾಕಷ್ಟು ಪಟಾಕಿ ಹೊಡೆಯಿರಿ: ಅಣ್ಣಾಮಲೈ

Sampriya
ಮಂಗಳವಾರ, 29 ಅಕ್ಟೋಬರ್ 2024 (14:04 IST)
Photo Courtesy X
ಚೆನ್ನೈ: ಪರಿಸರ ಮಾಲಿನ್ಯದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ದೀಪಾವಳಿಗೆ ಸಾಕಷ್ಟು ಪಟಾಕಿ ಹೊಡೆಯಿರಿ ಎಂದು ತಮಿಳುನಾಡಿ ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಮನವಿ ಮಾಡಿದ್ದಾರೆ.

ವಾತಾವರಣಕ್ಕೆ ಇಂಗಾಲ ಹೊರಸೂಸುವಿಕೆಯಲ್ಲಿ ಭಾರತ 125ನೇ ಸ್ಥಾನದಲ್ಲಿದೆ. ಅಮೆರಿಕ 16 ಮತ್ತು ಚೀನಾ 25ನೇ ಸ್ಥಾನದಲ್ಲಿವೆ. ಆದರೆ ನಾವು ಕೇವಲ ಒಂದು ದಿನ ಪಟಾಕಿ ಸಿಡಿಸುವುದನ್ನು ಪ್ರಮುಖ ವಿಷಯವಾಗಿ ಚರ್ಚಿಸುತ್ತಿದ್ದೇವೆ ಎಂದು ಎಕ್ಸ್ ನಲ್ಲಿ ವಿಡಿಯೊವನ್ನು ಪೋಸ್ಟ್ ಮಾಡಿರುವ ಅವರು, ಪಟಾಕಿಗಳನ್ನು ಸಿಡಿಸುವ ಅಗತ್ಯವನ್ನು ವಿವರಿಸಿದ್ದಾರೆ.

ಸುಮಾರು 8 ಲಕ್ಷ ಜನ ನೇರವಾಗಿ ಮತ್ತು ಪರೋಕ್ಷವಾಗಿ ಪಟಾಕಿ ಉದ್ಯಮದೊಂದಿಗೆ ಸಂಪರ್ಕ ಹೊಂದಿದ್ದಾರೆ. ಅವರು ನಮ್ಮ ಸಂತೋಷಕ್ಕಾಗಿ ಸಾಕಷ್ಟು ಸವಾಲುಗಳ ನಡುವೆ ಪಟಾಕಿಗಳನ್ನು ತಯಾರಿಸುತ್ತಾರೆ. ನಾವು ಅವರ ಸಂತೋಷಕ್ಕಾಗಿ ಪಟಾಕಿಗಳನ್ನು ಖರೀದಿಸಿ ಏಕೆ ಸಿಡಿಸಬಾರದು ಎಂದು ಅವರು ಕೇಳಿದ್ದಾರೆ.

ಪಟಾಕಿ ಸಿಡಿಸುವುದು ನಮ್ಮ ಸಂಸ್ಕೃತಿ ಮಾತ್ರವಲ್ಲ, ನಮ್ಮ ಜನರ ಜೀವನಾಧಾರ, ನಮ್ಮ ಶಿವಕಾಶಿ ಜನರ ಒಟ್ಟಾರೆ ಆರ್ಥಿಕತೆ. ನಮ್ಮ ಸಂತೋಷಕ್ಕಾಗಿ ಪಟಾಕಿಗಳನ್ನು ತಯಾರಿಸುವ ಕಾರ್ಮಿಕರ ಜೀವನೋಪಾಯಕ್ಕಾಗಿ ನಾವೆಲ್ಲರೂ ನಮ್ಮಿಂದ ಸಾಧ್ಯವಾದಷ್ಟು ಪಟಾಕಿಗಳನ್ನು ಖರೀದಿಸಿ ಸಿಡಿಸಬೇಕೆಂದು ನಾನು ವಿನಂತಿಸುತ್ತೇನೆ ಎಂದರು.

ಒಂದು ದಿನ ಪಟಾಕಿಗಳನ್ನು ಹಚ್ಚುವುದರಿಂದ ಏನೂ ಆಗುವುದಿಲ್ಲ. ಇದರಿಂದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಮಾರಾಟದ ಮೂಲಕ ಸಾಲ ತೀರಿಸುವ ಕನಸು ಕಾಣುತ್ತಿರುವ ಲಕ್ಷಾಂತರ ಸಣ್ಣ ವ್ಯಾಪಾರಿಗಳ ಕನಸು ನನಸಾಗುತ್ತದೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಆದರೆ ಪಟಾಕಿ ಸಿಡಿಸುವಾಗ ಜಾಗರೂಕರಾಗಿರಿ, ಪ್ರಾಣಿಗಳು ಸೇರಿದಂತೆ ಅನೇಕ ಜೀವಿಗಳು ನಮ್ಮೊಂದಿಗೆ ವಾಸಿಸುತ್ತವೆ, ಅವುಗಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರ ವಹಿಸಿ. ಈ ದೀಪಾವಳಿ ಹಬ್ಬ ಪ್ರತಿಯೊಬ್ಬರ ಬಾಳಿನಲ್ಲಿ ಬೆಳಕು ಚೆಲ್ಲಲಿ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments