Webdunia - Bharat's app for daily news and videos

Install App

ತಿರುಪತಿ ಲಡ್ಡು ಬಳಿಕ ಜಗನ್ ಪಕ್ಷದ ನಾಯಕಿ ಝಾಕಿಯಾ ಖಾನಂನಿಂದ ವಿಐಪಿ ಟಿಕೆಟ್ ಗೋಲ್ಮಾಲ್ ಬೆಳಕಿಗೆ

Krishnaveni K
ಮಂಗಳವಾರ, 22 ಅಕ್ಟೋಬರ್ 2024 (11:06 IST)
Photo Credit: X
ತಿರುಪತಿ: ಇತ್ತೀಚೆಗಷ್ಟೇ ತಿರುಪತಿ ಲಡ್ಡಿನಲ್ಲಿ ಜಗನ್ ರೆಡ್ಡಿ ಸಿಎಂ ಆಗಿದ್ದಾಗ ಪ್ರಾಣಿಗಳ ಕೊಬ್ಬು ಕಲಬೆರಕೆಯಾಗುತ್ತಿತ್ತು ಎಂಬ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಜಗನ್ ಪಕ್ಷದ ನಾಯಕಿ ಝಾಕಿಯಾ ಖಾನಂನಿಂದ ಟಿಕೆಟ್ ವಿಚಾರದಲ್ಲಿ ನಡೆದ ಗೋಲ್ಮಾಲ್ ಬೆಳಕಿಗೆ ಬಂದಿದೆ.

ತಿರುಪತಿಯಲ್ಲಿ ದೇವರ ದರ್ಶನಕ್ಕಾಗಿ ನೀಡಲಾಗುವ ವಿಐಪಿ ಟಿಕೆಟ್ ನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ದಂಧೆ ಬೆಳಕಿಗೆ ಬಂದಿದೆ. 10,500 ರೂ.ಗಳ ವಿಐಪಿ ಟಿಕೆಟ್ ನ್ನು ಝಾಕಿಯಾ ಮತ್ತು ಸಹಚರರು 65000 ರೂ.ಗೆ ಮಾರಾಟ ಮಾಡುತ್ತಿದ್ದುದು ಈಗ ಬೆಳಕಿಗೆ ಬಂದಿದೆ. ಇದರ ವಿರುದ್ಧ ಭಾರೀ ಆಕ್ರೋಶ ಕೇಳಿಬಂದಿದೆ.

ಈ ಸಂಬಂಧ ಝಾಕಿಯಾ ಹಾಗೂ ಆಕೆಯ ಇಬ್ಬರು ಆಪ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಗನ್ ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ತಿರುಪತಿಯಲ್ಲಿ ನಡೆದ ಮತ್ತೊಂದು ಹಗರಣ ಇದೀಗ ಬಯಲಿಗೆ ಬಂದಿದೆ. ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಜಗನ್ ಪಕ್ಷ ಈಗ ಝಾಕಿಯಾ ನಮ್ಮ ಪಕ್ಷದವರೇ ಅಲ್ಲ, ಟಿಡಿಪಿ ಪಕ್ಷದವರು ಎಂದಿದೆ.

ತಿರುಪತಿಗೆ ದೇವಾಲಯಕ್ಕೆ ಭೇಟಿ ನೀಡುವ ವಿಐಪಿಗಳಿಗೆ ಟಿಕೆಟ್ ವೆಚ್ಚ ಕಡಿತಗೊಳಿಸಲಾಗುತ್ತದೆ. ಶಾಸಕರು, ವಿಧಾನಪರಿಷತ್ ಸದಸ್ಯರಿಗೆ ವಿಶೇಷ ಕೋಟಾದಡಿ ಟಿಕೆಟ್ ನೀಡಲಾಗುತ್ತದೆ. ಈ ಟಿಕೆಟ್ ಗಳನ್ನು ಝಾಕಿಯಾ ತಮ್ಮ ಲಾಭಕ್ಕೆ ದುರುಪಯೋಗಪಡಿಸಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments