Webdunia - Bharat's app for daily news and videos

Install App

ಎಂಗೇಜ್ ಮೆಂಟ್ ಮಾಡಿಕೊಂಡ ನನ್ನರಸಿ ರಾಧೆ ನಟಿ ಕೌಸ್ತುಭ ಮಣಿ

Krishnaveni K
ಬುಧವಾರ, 6 ಮಾರ್ಚ್ 2024 (16:18 IST)
Photo Courtesy: Instagram
ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಈಗ ಮದುವೆ ಪರ್ವ ಎನಿಸುತ್ತಿದೆ. ಒಬ್ಬರಾದ ಮೇಲೊಬ್ಬ ನಟಿಯರು ಮದುವೆ ಸುದ್ದಿ ಕೊಡುತ್ತಿದ್ದಾರೆ. ಇದೀಗ ನಟಿ ಕೌಸ್ತುಭ ಮಣಿ ಎಂಗೇಜ್ ಮೆಂಟ್ ಸುದ್ದಿ ಕೇಳಿಬಂದಿದೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ನನ್ನರಸಿ ರಾಧೆ ಧಾರವಾಹಿಯಲ್ಲಿ ನಾಯಕಿ ಇಂಚರಾ ಪಾತ್ರ ಮಾಡುತ್ತಿದ್ದ ಕೌಸ್ತುಭ ಮಣಿ ಈಗ ಮದುವೆಯಾಗುತ್ತಿದ್ದಾರೆ. ಅವರ ಕೈ ಹಿಡಿಯಲಿರುವ ಹುಡುಗನ ಹೆಸರು ಸಿದ್ಧಾಂತ್ ಸತೀಶ್. ಇತ್ತೀಚೆಗಷ್ಟೇ ಎಂಗೇಜ್ ಮೆಂಟ್ ನಡೆದಿದೆ.

ಎಂಗೇಜ್ ಮೆಂಟ್ ನ ಫೋಟೋ, ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಕೌಸ್ತುಭ ತಮ್ಮ ಮದುವೆ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಇತ್ತೀಚೆಗೆ ಕೌಸ್ತುಭ ಸುವರ್ಣ ವಾಹಿನಿಯಲ್ಲಿ ಗೌರಿ ಶಂಕರ ಧಾರವಾಹಿಯ ನಾಯಕಿ ಪಾತ್ರದಿಂದ ಹೊರಬಂದಿದ್ದರು. ಇದಲ್ಲದೆ ಒಂದು ಸಿನಿಮಾದಲ್ಲೂ ಅವರು ಕಾಣಿಸಿಕೊಂಡಿದ್ದರು. ಇದೀಗ ಮದುವೆಯಾಗಲು ಹೊರಟಿದ್ದಾರೆ.

ಮೊನ್ನೆಯಷ್ಟೇ ಕನ್ನಡ ಕಿರುತೆರೆ ನಟಿ ದೀಪಿಕಾ ದಾಸ್ ದಿಡೀರ್ ಆಗಿ ತಮ್ಮ ಮದುವೆ ಫೋಟೋಗಳನ್ನು ಹಂಚಿಕೊಂಡು ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದರು. ಅದಾದ ಬಳಿಕ ಮತ್ತೊಬ್ಬ ಕಿರುತೆರೆ ನಟಿ ನಯನಾ ನಾಗರಾಜ್ ತಮ್ಮ ಬಹುಕಾಲದ ಗೆಳೆಯ ಸುಹಾಸ್ ಶಿವಣ್ಣ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಕೌಸ್ತುಭ ಸರದಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ಗಾಯಕ ಸೋನು ನಿಗಮ್‌ಗೆ ಬಿಗ್‌ ರಿಲೀಫ್‌, ಹೈಕೋರ್ಟ್‌ ಹೇಳಿದ್ದೇನು ನೋಡಿ

Jr NTR: ಎನ್‌ಟಿಆರ್‌ಗೆ ಅರಸಿ ಬಂದ ಬಿಗ್ ಬಾಲಿವುಡ್ ಆಫರ್‌, ಇಲ್ಲಿದೆ ಅಪ್ಡೇಟ್ಸ್‌

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

ಮುಂದಿನ ಸುದ್ದಿ
Show comments