Webdunia - Bharat's app for daily news and videos

Install App

ಕಿರುತೆರೆ ನಟ ಸ್ಕಂದ ಅಶೋಕ್ ಗೆ ವಂಚನೆ: ದೂರು ಕೊಟ್ಟ ನಟ

Krishnaveni K
ಶುಕ್ರವಾರ, 12 ಏಪ್ರಿಲ್ 2024 (11:53 IST)
ಬೆಂಗಳೂರು: ರಾಧಾ ರಮಣ ಧಾರವಾಹಿ ಖ್ಯಾತಿಯ ಖ್ಯಾತ ನಟ ಸ್ಕಂದ ಅಶೋಕ್ ಹೆಸರಿನಲ್ಲಿ ಹಣಕಾಸಿನ ವಂಚನೆ ಮಾಡುವ ಪ್ರಯತ್ನ ನಡೆದಿದ್ದು, ನಟ ಪೊಲೀಸರಿಗೆ ದೂರು ನೀಡಿದ್ದಾರೆ.

ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್ ವುಡ್ ಸಿನಿಮಾಗಳಲ್ಲಿ ನಟಿಸಿ ತಮ್ಮದೇ ಅಭಿಮಾನಿ ಬಳಗವನ್ನು ಸೃಷ್ಟಿಸಿರುವ ನಟ ಸ್ಕಂದ ಅಶೋಕ್ ಹೆಸರಿನಲ್ಲಿ ಇನ್ ಸ್ಟಾಗ್ರಾಂನಲ್ಲಿ ವಂಚನೆಗೆ ಪ್ರಯತ್ನ ನಡೆದಿದೆ. ನಟನ ಇನ್ ಸ್ಟಾಗ್ರಾಂ ಖಾತೆ ಹ್ಯಾಕ್ ಮಾಡಿ ಅವರ ಪರಿಚಯದವರಿಗೆ ಸಂದೇಶ ಕಳುಹಿಸಿ ಹಣ ನೀಡುವಂತೆ ವಂಚಕರು ಬೇಡಿಕೆಯಿಟ್ಟಿದ್ದಾರೆ.

ಇದು ಸ್ಕಂದ ಅರಿವಿಗೆ ಬಂದಿದ್ದು, ತಕ್ಷಣವೇ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ವಂಚಕರ ಹಿನ್ನಲೆ ಪರಿಶೀಲಿಸಿದಾಗ ಬೆಂಗಳೂರು, ಚೆನ್ನೈ ಮತ್ತು ನೈಜೀರಿಯಾ ಮೂಲ ತೋರಿಸುತ್ತಿದೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ರೀತಿ ಸೆಲೆಬ್ರಿಟಿಗಳ ಸೋಷಿಯಲ್ ಮೀಡಿಯಾ ಖಾತೆ ಹ್ಯಾಕ್ ಮಾಡಿ ವಂಚನೆ ಮಾಡುವುದು ಇದೇ ಮೊದಲಲ್ಲ. ಹಲವು ಬಾರಿ ಅನೇಕ ತಾರೆಯರು ಈ ರೀತಿ ವಂಚನೆಗಳೊಗಾಗಿದ್ದು ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

Sitare Zameen Par: ಸಿನಿಮಾ ಬಾಯ್ಕಾಟ್ ಭಯಕ್ಕೆ ಎಕ್ಸ್ ಪೇಜ್ ಗೆ ತ್ರಿವರ್ಣ ಧ್ವಜ ಹಾಕಿದ ಅಮೀರ್ ಖಾನ್ ಸಂಸ್ಥೆ

Archana Udupa: ಅರ್ಚನಾ ಉಡುಪಗೆ ಕ್ಯಾನ್ಸರ್ ನಿಜಾನಾ: ಗಾಯಕಿ ಹೇಳಿದ್ದೇನು

Puneet Rajkumar: ನಟ ಪುನೀತ್ ಮಗಳಿಗೆ ವಿದೇಶದಲ್ಲಿ ಸಿಕ್ತು ಪದವಿ, ಓದಿದ್ದೇನು ಗೊತ್ತಾ

Ravana Cinema: ರಾವಣನ ಪತ್ನಿಯಾಗಿ ಯಶ್‌ಗೆ ಜೋಡಿಯಾದ ಕಾಜಲ್ ಅಗರ್ವಾಲ್‌

ಮುಂದಿನ ಸುದ್ದಿ
Show comments