Webdunia - Bharat's app for daily news and videos

Install App

ಬಿಗ್ ಬಾಸ್ ಮನೆಯಲ್ಲಿ ಬಾಯ್ತಪ್ಪಿ ಆಡಿದ ಮಾತಿಗೆ ಕ್ಷಮೆ ಕೋರಿದ ಸಿಹಿಕಹಿ ಚಂದ್ರು

Webdunia
ಗುರುವಾರ, 2 ನವೆಂಬರ್ 2017 (11:11 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ರಿಯಾಲಿಟಿ ಶೋ ಮನೆಯೊಳಗೆ ಬಾಯ್ತಪ್ಪಿನಿಂದ ಭೋವಿ ಜನಾಂಗಕ್ಕೆ ನೋವುಂಟು ಮಾಡುವ ಹೇಳಿಕೆ ನೀಡಿದ್ದ ಸಿಹಿ ಕಹಿ ಚಂದ್ರು ಕ್ಷಮೆ ಯಾಚಿಸಿದ್ದಾರೆ.

 
ಸಹ ಸ್ಪರ್ಧಿ ದಿವಾಕರ್ ಜತೆಗೆ ಕಿಚನ್ ಏರಿಯಾದಲ್ಲಿ ಮಾತನಾಡುವಾಗ ‘ವಡ್ಡ’ ಎಂದು ಸಿಹಿ ಕಹಿ ಚಂದ್ರು ಪದ ಪ್ರಯೋಗ ಮಾಡಿದ್ದರು. ಅದು ಒರಟ ಎನ್ನುವುದಕ್ಕೆ ಬಳಸಿದ್ದೆ ಎಂದು ಸಮಜಾಯಿಷಿ ಕೊಟ್ಟಿದ್ದರು.

ಆದರೆ ಸಿಹಿ ಕಹಿ ಚಂದ್ರು ಅವರ ಈ ಪದ ಪ್ರಯೋಗ ಅಖಿಲ ಕರ್ನಾಟಕ ಭೋವಿ (ವಡ್ಡರ) ಯುವ ವೇದಿಕೆ ಕೆಂಗಣ್ಣಿಗೆ ಗುರಿಯಾಗಿದ್ದು, ಬಿಗ್ ಬಾಸ್ ಮನೆಯಿರುವ ಇನೋವಾ  ಫಿಲಂ ಸಿಟಿ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

ಈ ಘಟನೆಯ ನಂತರ ಚಂದ್ರು ಅವರನ್ನು ಕನ್ ಫೆಷನ್ ರೂಂಗೆ ಕರೆಸಿಕೊಂಡ ಬಿಗ್  ಬಾಸ್ ಘಟನೆ ಬಗ್ಗೆ ಏನಾದರೂ ಹೇಳಲು ಬಯಸುತ್ತೀರಾ ಎಂದು ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಚಂದ್ರು, ನಾನು ಯಾರನ್ನೂ ನೋಯಿಸುವ ಉದ್ದೇಶದಿಂದ ಆ ಪದ ಬಳಸಿರಲಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments