ನೋಟು ಮುದ್ರಣ ಘಟಕದಿಂದ 5 ಲಕ್ಷ ರೂಪಾಯಿ ನಾಪತ್ತೆ!

Webdunia
ಬುಧವಾರ, 14 ಜುಲೈ 2021 (20:15 IST)
ನಾಸಿಕ್(ಜು.14):  ಗರಿಷ್ಠ ಭದ್ರತೆ, ಹೆಜ್ಜೆ ಹೆಜ್ಜೆಗೂ ಸಿಸಿಟಿವಿ, ಸಿಬ್ಬಂದಿಗಳನ್ನು ಹೊರತು ಪಡಿಸಿ ಇನ್ಯಾರಿಗೂ ಪ್ರವೇಶವಿಲ್ಲ. ಇಂತಹ ಹೈ ಲೆವೆಲ್ ಸೆಕ್ಯೂರಿಟಿ ಇದ್ದರೂ ನಾಸಿಕ್ನಲ್ಲಿರುವ ಸರ್ಕಾರದ ನೋಟು ಮುದ್ರಣ ಘಟಕದಿಂದ 5 ಲಕ್ಷ ರೂಪಾಯಿ ನಾಪತ್ತೆಯಾಗಿದೆ. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಲಾವಣೆಯಲ್ಲಿರುವ ನಗದು 5 ಲಕ್ಷ ಕೋಟಿ ರುಪಾಯಿಯಷ್ಟು ಏರಿಕೆ
•             ಗರಿಷ್ಠ ಭದ್ರತೆಯ ಸರ್ಕಾರದ ನೋಟು ಮುದ್ರಣ ಘಟಕದಲ್ಲೇ ಕಳ್ಳತನ
•             5 ಲಕ್ಷ ರೂಪಾಯಿ ನಾಪತ್ತೆ, ಮುದ್ರಣ ಘಟಕದ ಸಿಬ್ಬಂದಿಗಳ ಕೃತ್ಯ ಶಂಕೆ
•             ದೂರು ದಾಖಲು, ಆಂತರಿಕ ತನಿಖೆ ಜೊತೆಗೆ ಪೊಲೀಸ್ ತನಿಖೆ

 
ಇತ್ತೀಚೆಗೆ ನಾಸಿಕ್ ಘಟಕದಲ್ಲಿ ಸರ್ಕಾರದ ನಿಯಮದ ಪ್ರಕಾರ 500 ರೂಪಾಯಿ ಮುಖಬೆಲೆಯ ನೋಟುಗಳನ್ನು ಮುದ್ರಿಸಲಾಗಿತ್ತು.  ಆದರೆ ಮುದ್ರಿತ ನೋಟುಗಳ ಪೈಕಿ 1,000 ನೋಟುಗಳು ಕಾಣೆಯಾಗಿದೆ. ಮುದ್ರಣ ಘಟಕದಿಂದ ನೋಟು ಕಳ್ಳತನ ಅಸಾಧ್ಯದ ಮಾತಾಗಿತ್ತು. ಆದರೆ ಇದೀಗ  ಈ ಘಟನೆ ನಡೆದುಹೋಗಿದೆ.
ಭಾರತದ ಅತೀ ದೊಡ್ಡ ಕ್ರಿಪ್ಟೋ ಕರೆನ್ಸಿ ವಿನಿಮಯ WazirXಗೆ ಇಡಿ ಶೋಕಾಸ್ ನೋಟಿಸ್
ಹೊರಗಿನಿಂದ ಯಾರಿಗೂ ಪ್ರವೇಶ ಇಲ್ಲದ ಕಾರಣ ಈ ಕೃತ್ಯವನ್ನು ಸಿಬ್ಬಂದಿಗಳೇ ಮಾಡಿರುವ ಸಾಧ್ಯತೆ ಹೆಚ್ಚು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಈಗಾಗಲೇ ನಾಸಿಕ್ ನೋಟು ಮುದ್ರಣ ಘಟಕದ ಅಧಿಕಾರಿಗಳು ಆಂತರಿಕ ತನಿಖೆ ನಡೆಸಲಾಗುತ್ತಿದೆ. ಇದರ ಜೊತೆಗೆ ಉಪನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 381  ಅಡಿಯಲ್ಲಿ FIR ದಾಖಲಿಸಲಾಗಿದೆ.  ತನಿಖೆಯಲ್ಲಿ ಕೆಲ ಮಾಹಿತಿಗಳನ್ನು ಕೆಲ ಹಾಕಲಾಗಿದೆ ಎಂದು  ಉಪನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಅನಿಲ್ ಶಿಂಧೆ  ಹೇಳಿದ್ದಾರೆ

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಕೊಟ್ಟ ಶಾಸಕ ಬಸವರಾಜ ರಾಯರೆಡ್ಡಿ

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮತ ಮರು ಎಣಿಕೆಯಲ್ಲಿ ದೊಡ್ಡ ಪಿತೂರಿ: ಶಿವಕುಮಾರ್ ಕಿಡಿ

ಶೃಂಗೇರಿಯಲ್ಲಿ ಹೈಡ್ರಾಮಾ: ಅಂಚೆ ಮತಗಳ ಮರು ಎಣಿಕೆಯಲ್ಲಿ ಜೀವರಾಜ್‌ಗೆ ಮುನ್ನಡೆ, ಬಿಜೆಪಿ ಸಂಭ್ರಮಾಚರಣೆ

ಶೃಂಗೇರಿಯ ಧರ್ಮಭೂಮಿಯಲ್ಲಿ ಕೊನೆಗೂ ಸತ್ಯಕ್ಕೆ ಜಯ ಸಿಕ್ಕಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Karnataka Weather: ರಾಜ್ಯ ರಾಜಧಾನಿಯಲ್ಲಿ ಇಂದು ಗುಡುಗು ಸಹಿತ ಮಳೆಯ ಸಾಧ್ಯತೆ

ಮುಂದಿನ ಸುದ್ದಿ
Show comments