Webdunia - Bharat's app for daily news and videos

Install App

ಹಿಮಾಚಲದಲ್ಲಿ ಮಳೆ ಅವಾಂತರಕ್ಕೆ 71 ಬಲಿ !

Webdunia
ಗುರುವಾರ, 17 ಆಗಸ್ಟ್ 2023 (08:20 IST)
ಶಿಮ್ಲಾ : ಕಳೆದ 3 ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ನಡೆಯುತ್ತಿರುವ ಮಳೆಯ ಅವಾಂತರಕ್ಕೆ 71 ಜನರು ಬಲಿಯಾಗಿದ್ದಾರೆ. ರಾಜ್ಯಾದ್ಯಂತ ಮಳೆಯಿಂದಾದ ದುರ್ಘಟನೆಯಿಂದಾಗಿ ಸುಮಾರು 7,500 ಕೋಟಿ ರೂ. ನಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಜುಲೈಗಿಂತ ಆಗಸ್ಟ್ 13, 14 ಹಾಗೂ 15ರ ಅವಧಿಯಲ್ಲಿ ಮಳೆಯ ಅವಾಂತರದಿಂದಾಗಿ ಹೆಚ್ಚಿನ ಹಾನಿ ಸಂಭವಿಸಿದೆ. ಸಾವಿನ ಸಂಖ್ಯೆ 71 ತಲುಪಿದ್ದು, ಸುಮಾರು 7,500 ಕೋಟಿ ರೂ. ನಷ್ಟವಾಗಿದೆ. ಜನರು ರಕ್ಷಣಾ ಹಾಗೂ ಪರಿಹಾರ ಕಾರ್ಯಗಳಲ್ಲಿ ತೊಡಗಿರುವುದರಿಂದ ಈ ಅಂದಾಜು ಹೆಚ್ಚುವ ಸಾಧ್ಯತೆಯಿದೆ ಎಂದು ವಿಪತ್ತು ನಿರ್ವಹಣಾ ಪ್ರಧಾನ ಕಾರ್ಯದರ್ಶಿ ಓಂಕಾರ್ ಚಂದ್ ಶರ್ಮಾ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು, ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ನಿಧಿ ಹಾಗೂ ಸ್ಥಳೀಯ ಜನರು ಸೇರಿದಂತೆ ಸ್ಥಳಾಂತರ ಕಾರ್ಯವನ್ನು ಬೃಹತ್ ಪ್ರಮಾಣದಲ್ಲಿ ನಡೆಸಲಾಗುತ್ತಿದೆ. ಸುಮಾರು 2,500 ಜನರನ್ನು ಸುರಕ್ಷತ ಸ್ಥಳಗಳಿಗೆ ಕಳುಹಿಸಿದ್ದೇವೆ ಎಂದು ಹೇಳಿದ್ದಾರೆ. 

ರಾಜ್ಯ ವಿಪತ್ತು ನಿರ್ವಹಣೆಯ ಅಂಕಿ ಅಂಶದ ಪ್ರಕಾರ 1,762 ಮನೆಗಳು ಸಂಪೂರ್ಣ ಹಾನಿಯಾಗಿವೆ. 8,952 ಮನೆಗಳು ಭಾಗಶಃ ಹಾನಿಯಾಗಿವೆ. ಈ ವರ್ಷದ ಮುಂಗಾರು ಋತುವಿನಲ್ಲಿ 113 ಭೂಕುಸಿತಗಳು ಸಂಭವಿಸಿವೆ ಎಂದು ಮಾಹಿತಿ ನೀಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments