Webdunia - Bharat's app for daily news and videos

Install App

ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದಂತೆ ಎಚ್ಚೆತ್ತ ಸರ್ಕಾರ

Webdunia
ಶುಕ್ರವಾರ, 20 ಆಗಸ್ಟ್ 2021 (10:33 IST)
ಕಳೆದ ಏಪ್ರಿಲ್, ಮೇನಲ್ಲಿ ಕೊರೊನಾ ಎರಡನೇ ಅಲೆಯಿಂದ ತತ್ತರಿಸಿದ ಆತಂಕವು ಮಾಸವು ಮುನ್ನವೇ ರಾಜಧಾನಿ ಬೆಂಗಳೂರು ನಗರವನ್ನು ಮತ್ತೊಂದು ಕೊರೊನಾ ಅಲೆಯ ಭೀತಿ ನಿಧಾನವಾಗಿ ಆವರಿಸಲು ಆರಂಭವಾದಂತೆ ಕಾಣುತ್ತಿದೆ.

ಇದಕ್ಕೆ ಪುಷ್ಟಿ ನೀಡುವಂತೆ ಕಳೆದ ಐದು ದಿನಗಳಲ್ಲಿ ಸುಮಾರು 250 ಮಕ್ಕಳಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಪತ್ತೆಯಾಗಿವೆ. ಇದರಿಂದ ಎಚ್ಚೆತ್ತಿರುವ ರಾಜ್ಯ ಸರ್ಕಾರವು ಕೂಡಲೇ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ಅಗತ್ಯ ತುರ್ತು ಸೌಲಭ್ಯಗಳನ್ನು ನಗರದ ಎಲ್ಲ ಆಸ್ಪತ್ರೆಗಳಲ್ಲಿ ಸಿದ್ಧವಾಗಿರಿಸಲು ಖಡಕ್ ಆದೇಶ ಹೊರಡಿಸಿದೆ. ಅದರ ಜತೆಗೆ 15 ಲಕ್ಷ ಮಕ್ಕಳಿಗೆ ಕೊರೊನಾ ತಪಾಸಣೆ ನಡೆಸಲು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಶೀಘ್ರವೇ 'ಆರೋಗ್ಯ ನಂದನ 'ಎಂಬ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದು, ಸಂಭಾವ್ಯ ಕೊರೊನಾ ಮೂರನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ವೈದ್ಯಕೀಯ ವ್ಯವಸ್ಥೆಯನ್ನು ಚುರುಕುಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ.
ನಗರದ ದಕ್ಷಿಣ ಭಾಗದಲ್ಲಿ ಮಕ್ಕಳಿಗೆ ಮತ್ತು ಗರ್ಭಿಣಿಯರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಲ್ಲಿ ಅವರನ್ನು ಐಸೊಲೇಷನ್ನಲ್ಲಿ ಇರಿಸಿ, ಅಗತ್ಯ ಚಿಕಿತ್ಸೆ ನೀಡಲು ವಿಶೇಷ ಶಿಶು ಕೋವಿಡ್ ಕೇರ್ ಕೇಂದ್ರ (ಸಿಸಿಸಿ) ಸ್ಥಾಪಿಸಲಾಗಿದೆ. ಎನ್ಜಿಒಗಳ ಸಹಾಯದಿಂದ ಬಿಬಿಎಂಪಿಯು ಈ ಕೇಂದ್ರ ತೆರೆದಿದೆ. ನಗರದಲ್ಲಿ ಸೋಂಕಿತರ ಪೈಕಿ ಶೇ. 11ರಷ್ಟು ಮಂದಿ 18 ವರ್ಷವೊಳಗಿನ ಮಕ್ಕಳಾಗಿದ್ದಾರೆ ಎಂದು ತಿಳಿದುಬಂದಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಜನರ ಋಣ ತೀರಿಸಲು ಆರನೇಯ ಭೂ ಗ್ಯಾರಂಟಿ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

Covid 19: ಮತ್ತೆ ಶುರುವಾಯ್ತು ಕೊರೋನಾ ಹಾವಳಿ: ಈಗ ಬಂದಿರುವ ಹೊಸ ವೈರಸ್ ಯಾವುದು

ಮುಂದಿನ ಸುದ್ದಿ
Show comments