Webdunia - Bharat's app for daily news and videos

Install App

ಜೇಬಲ್ಲಿ ದುಡ್ಡಿಲ್ಲ ಅಂದ್ರೂ ಬಿಡಲ್ಲ ಪೊಲೀಸ್!

Webdunia
ಸೋಮವಾರ, 5 ಜುಲೈ 2021 (17:06 IST)
ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಮೇಲೆ ದಂಡ ಕಟ್ಟಿಸಿಕೊಳ್ಳುವ ಪೊಲೀಸರು ಹಾಗೂ ಸವಾರರ ನಡುವೆ ವಾಗ್ಯುದ್ದಗಳೇ ನಡೆದು ಹೋಗಿವೆ. ಸಂಚಾರಿ ನಿಯಮ ಉಲ್ಲಂಘನೆ ಮಾಡಿದರು ನನ್ನ ಬಳಿ ದುಡ್ಡಿಲ್ಲ ಎಂದು ಸಬೂಬು ಹೇಳಿ ತಪ್ಪಿಸಿಕೊಳ್ಳಲು ಆಗುವುದೇ ಇಲ್ಲ. 
ಬೆಂಗಳೂರು ನಗರ ಸಂಚಾರಿ ಪೊಲೀಸ್ ವಿಭಾಗ ಈಗ ಸ್ಮಾರ್ಟ್ ಆಗುವತ್ತ ಹೆಜ್ಜೆ ಇಟ್ಟಿದೆ. ಸಂಚಾರ ನಿಯಮ ಉಲ್ಲಂಘನೆಗಳ ದಂಡ ಪಾವತಿಗೆ ಎಂದು ಪೇಟಿಎಂ ಮೂಲಕ ಅವಕಾಶ ಕಲ್ಪಿಸಲಾಗಿದೆ.ಸೋಮವಾರ (ಜುಲೈ 5) ಬೆಳಿಗ್ಗೆ ಕಮಿಷನರ್ ಕಮಲ್ ಪಂತ್ ಅವರು ಈ ಸೌಲಭ್ಯವನ್ನು ಉದ್ಘಾಟನೆ ಮಾಡಿದರು. ಇದುವರೆಗು ಡಿಜಿಟಲ್ ವೇದಿಕೆಯ ಮೂಲಕ ದಂಡ ಪಾವತಿಸಲು ಅವಕಾಶ ಇರಲಿಲ್ಲ. ಈಗ ಪೇಟಿಎಂ ಸೌಲಭ್ಯ ಈ ಕೊರತೆ ನೀಗಿಸಿದೆ. ಈ ಮೊದಲು  ಇ-ಅhಚಿಟಟಚಿಟಿ - ಆigiಣಚಿಟ ಖಿಡಿಚಿಜಿಜಿiಛಿ/ಖಿಡಿಚಿಟಿsಠಿoಡಿಣ ಇಟಿಜಿoಡಿಛಿemeಟಿಣ Soಟuಣioಟಿ ವೆಬ್ಸೈಟ್ಗೆ  ಭೇಟಿ ನೀಡಿ ನಂತರ ‘ಗೆಟ್ ಚಲನ್ ಡೀಟೈಲ್ಸ್‘ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ‘ಚಲನ್ ನಂಬರ್‘, ‘ವೆಹಿಕಲ್ ನಂಬರ್‘, ‘ಡಿಎಲ್ ನಂಬರ್‘ ನಮೂದಿಸಿದ ನಂತರ  ಪರಿಶೀಲಿಸಿ ಆನ್ಲೈನ್ನಲ್ಲಿ  ಪಾವತಿ ಆಯ್ಕೆಯನ್ನು ಕ್ಲಿಕ್ ಮಾಡಿ ಓಟಿಪಿ ನಮೂದಿಸಿ ಇ-ಚಲನ್ ಮೂಲಕ ಪಾವತಿ ಮಾಡುವ ಅವಕಾಶವಿತ್ತು.



ಅಲ್ಲದೇ ಡಿಜಿಟಲ್ ರೂಪದಲ್ಲಿ ಪಾವತಿ ಮಾಡಲು ಬೆಂಗಳೂರು ಓನ್
ವೆಬ್ ಸೈಟ್ ,ಪಿಡಿಎ ಮೆಷಿನ್ ಗಳಲ್ಲಿ ಸೌಲಭ್ಯವಿತ್ತು. ಇದು ದಂಡ ಕಟ್ಟದೆ ಅನೇಕರು ಓಡಾಡುವುದಕ್ಕೆ ದಾರಿ ಮಾಡಿಕೊಟ್ಟಿತ್ತಲ್ಲದೆ. ಸಂಚಾರ ನಿಯಮ ಉಲ್ಲಂಘನೆ ಮಾಡಿದ ಮೇಲೆ ದಂಡ ವಸೂಲಾತಿಯೇ ತಲೆ ನೋವಾಗಿ ಸಂಚಾರಿ ಪೊಲೀಸರಿಗೆ ಪರಿಣಮಿಸಿತ್ತು. ಆದರೆ ಈಗ ಈ ಎಲ್ಲಾ ರೀತಿಯ ಗೊಡವೆಗಳಿಗೆ ಪೊಲೀಸ್ ಇಲಾಖೆ ಗುಡ್ ಬೈ ಹೇಳಿದೆ.
ಈಗಂತೂ ಹೆಚ್ಚಿನವರ ಬಳಿ ಸ್ಮಾರ್ಟ್ ಫೋನ್ ಇದ್ದೆ ಇರುತ್ತದೆ, ಸ್ಮಾರ್ಟ್ ಫೋನ್ ಇದ್ದವರ ಬಳಿ ಪೇಟಿಎಂ ಅಥವಾ ಇತರೆ ಡಿಜಿಟಲ್ ಪೇಮೆಂಟ್ ಆ್ಯಪ್ಗಳು ಇದ್ದೇಇರುತ್ತವೆ. ಈ ಅಂಶವನ್ನೇ ಗಮನದಲ್ಲಿ ಇಟ್ಟುಕೊಂಡು ಹೊಸಾ ತಂತ್ರಜ್ಣಾನದ ಮೊರೆ ಹೋಗಿದ್ದು, ನೀವೇನಾದರೂ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ, ನಿಮ್ಮ ಬಳಿ ಪೇಟಿಎಂ ಪೇಮೆಂಟ್ ಆ್ಯಪ್ ಇದ್ದರೆ ದಂಡ ಪಾವತಿ ಬಗ್ಗೆ ನೋಟಿಫಿಕೇಶನ್ ಬರುತ್ತದೆ. ಆ ನೋಟಿಫಿಕೇಶನ್ ಒತ್ತಿ ದಂಡ ಪಾವತಿಸಬಹುದು. ಟೆಲಿಬ್ರಹ್ಮ ಸಾಫ್ಟ್ ವೇರ್ ಸರ್ವೀಸಸ್ ಸಹಯೋಗದೊಂದಿಗೆ ಸರ್ವೀಸ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಈ ತಂತ್ರಜ್ಞಾನವನ್ನು ಜಾರಿಗೆ ತರಲಾಗಿದೆ.
ಸಂಚಾರಿ ನಿಯಮ ಉಲ್ಲಂಘನೆಯಾದ ಮೇಲೆ ದಂಡ ಪಾವತಿಯ ವೇಳೆ ಪೊಲೀಸ್ ಹಾಗೂ ಸಾರ್ವಜನಿಕರ ನಡುವೆ ಸಾಕಷ್ಟು ವಾಗ್ಯುದ್ದಗಳೇ ನಡೆದು ಹೋಗುತ್ತಿದ್ದವು. ಈಗ ನಗದು ರಹಿತವಾಗಿ ದಂಡ ಪಾವತಿಸಲು ಹೊಸ ಮಾರ್ಗ ಇದಾಗಿದ್ದು ಇನ್ನಾದರೂ ದಂಡ ಪಾವತಿ ವೇಳೆ ಅನವಶ್ಯಕ ಸಮಯ ವ್ಯರ್ಥವಾಗುವುದು, ಜಗಳಗಳಾಗುವುದು ಹೀಗೆ ಅನೇಕ ತಲೆ ನೋವುಗಳು ಇಲ್ಲವಾಗಿದ್ದು ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಿದೆಯೋ ತಿಳಿದಿಲ್ಲ. ಆದರೆ ಪೊಲೀಸರ ಕೆಲಸವಂತೂ ಈಗ ಸುಲಭವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments