ಪಂಚಭೂತಗಳಲ್ಲಿ ವಿಲೀನರಾದ ಅಜಾತ ಶತ್ರು ವಾಜಪೇಯಿ

Webdunia
ಶುಕ್ರವಾರ, 17 ಆಗಸ್ಟ್ 2018 (16:59 IST)
ನವದೆಹಲಿ: ನಿನ್ನೆ ನಿಧನರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಂತಿಮ ಸಂಸ್ಕಾರ ಕಾರ್ಯಗಳು ಪೂರ್ಣಗೊಂಡಿವೆ.
 

ದೆಹಲಿಯ ರಾಷ್ಟ್ರೀಯ ಸ್ಮೃತಿ ಸ್ಮಾರಕದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ವಾಜಪೇಯಿ ಅವರ ಅಂತ್ಯ ಸಂಸ್ಕಾರ ನೆರವೇರಿದೆ. ದತ್ತು ಪುತ್ರಿ ನಮಿತಾ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

ಇದಕ್ಕೂ ಮೊದಲು ದೇಶ-ವಿದೇಶದ ಗಣ್ಯರು ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು. ಭೂತಾನ್ ದೊರೆ ಜಿಗ್ಮೆ ಕೇಸರ್, ಅಫ್ಘಾನಿಸ್ತಾನ ಮಾಜಿ ಅಧ್ಯಕ್ಷ ಹಮೀದ್ ಕರ್ಜಾಯಿ, ಪ್ರಧಾನಿ ಮೋದಿ, ರಾಷ್ಟ್ರಪತಿ ರಮಾನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮೂರೂ ಸೇನಾ ನಾಯಕರು ಸೇರಿದಂತೆ ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಅಂತ್ಯ ಸಂಸ್ಕಾರದ ವೇಳೆ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಕೊನೆಯ ಬಾರಿಗೊಮ್ಮೆ ಅಭಿಮಾನಿಗಳು ತಮ್ಮ ಮೆಚ್ಚಿನ ನಾಯಕನ ದರ್ಶನ ಮಾಡಿದರು. ಅಂತಿಮವಾಗಿ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತ್ಯ ಸಂಸ್ಕಾರ ಕಾರ್ಯಕ್ರಮಗಳು ನೆರವೇರಿದವು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುನಿಯಾ ವಿಜಯ್‌ಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಕ್ತು ಭರ್ಜರಿ ಗಿಫ್ಟ್‌

₹7 ಲಕ್ಷದ ಕಾರಿಗೆ ಬರೋಬ್ಬರಿ 2ಕೋಟಿಯ ನಂಬರ್ ಪ್ಲೇಟ್ ಖರೀದಿಸಿದ ವ್ಯಕ್ತಿ

ಮಾದಕ ವ್ಯಸನಿ ತಂದೆಯಿಂದಲೇ ಕೊಲೆಯಾದ ಮಗಳು, ಮಂಜೇಶ್ವರದಲ್ಲಿ ಕರುಣಾಜನಕ ಸ್ಟೋರಿ

ನಿಪಾ ವೈರಸ್: ಕರ್ನಾಟಕದಲ್ಲಿ ಹೈ ಅಲರ್ಟ್‌

ವಾಟ್ಸ್‌ಆ್ಯಪ್‌ನ ಗೌಪ್ಯತೆ ಉಲ್ಲಂಘನೆಯಾದರೆ ಸಹಿಸುವುದಿಲ್ಲ: ಮೆಟಾ ಸಂಸ್ಥೆಗೆ ಸುಪ್ರೀಂ ಖಡಕ್‌ ವಾರ್ನಿಂಗ್‌

ಮುಂದಿನ ಸುದ್ದಿ
Show comments