ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ!

Webdunia
ಶುಕ್ರವಾರ, 31 ಡಿಸೆಂಬರ್ 2021 (14:55 IST)
ಬೆಂಗಳೂರು : ನಗರದಲ್ಲಿ ಇಂದು (ಡಿಸೆಂಬರ್ 31) ಸಂಜೆ 6 ಗಂಟೆಯಿಂದ ನಾಳೆ (ಜನವರಿ 1) ಬೆಳಗ್ಗೆ 5 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಡಿಸೆಂಬರ್ 31ರ ಸಂಜೆ 6 ರಿಂದ ಜನವರಿ 1ರ ಮುಂಜಾನೆ 5 ಗಂಟೆ ವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಪ್ರಮುಖ ರಸ್ತೆ, ವೃತ್ತಗಳಲ್ಲಿ 5 ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದು ತಿಳಿಸಲಾಗಿದೆ.

ಬೆಂಗಳೂರು ನಗರದಲ್ಲಿ ಇಂದು ಸಂಜೆ 6 ಗಂಟೆಯಿಂದ ನಿರ್ಬಂಧವಿದೆ. ಹೊಸ ವರ್ಷಾಚರಣೆ ಹೆಸರಿನಲ್ಲಿ ಹೆಚ್ಚು ಜನರ ಸೇರಬಾರದು. ರಾತ್ರಿ 10 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ವಿಧಾನಸೌಧದಲ್ಲಿ ಗೃಹ ಖಾತೆ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಕರ್ನಾಟಕ ಸೇರಿ 8 ರಾಜ್ಯಗಳಲ್ಲಿ ಕೊರೊನಾ ಸ್ಫೋಟವಾಗಿದೆ. ಕೊರೊನಾ ಸೋಂಕು ಹರಡದಂತೆ ತಡೆಯಲು ನಿರ್ಬಂಧ ವಿಧಿಸಲಾಗುತ್ತಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ನಿರ್ಬಂಧ ಹಾಕಲಾಗಿದೆ. ಜನರು ತಮ್ಮ ಮನೆಗಳಲ್ಲೇ ಹೊಸವರ್ಷಾಚರಣೆ ಮಾಡಬೇಕು ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಹೋಟೆಲ್, ಪಬ್, ರೆಸ್ಟೋರೆಂಟ್ ಮಾಲೀಕರಿಗೆ ಆರ್ಥಿಕ ನಷ್ಟ ವಿಚಾರವಾಗಿ ವಿಧಾನಸೌಧದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ನಿರ್ಬಂಧಗಳನ್ನ ಹಾಕಲು ನಮಗೆ ಸಂತೋಷವಿಲ್ಲ, ನಮಗೆ ನೋವಿದೆ.

ಹೋಟೆಲ್ ಪಬ್ ಅವರವರ ವ್ಯಾಪರ ಮಾಡ್ತಿದ್ದಾರೆ. ಆದ್ರೆ ಸದ್ಯ ಬದುಕು ಮುಖ್ಯ. ನಾವು ಈಗಾಗಲೇ ಸ್ಮಶಾನದಲ್ಲಿ ಆ್ಯಂಬುಲೆನ್ಸ್ಗಳು ಕ್ಯೂ ನಿಂತಿದ್ದನ್ನ ನೋಡಿದ್ದೇವೆ. ಮಾಧ್ಯಮಗಳಲ್ಲಿ ಅದನ್ನು ನೋಡುವಾಗ ತುಂಬಾ ನೋವಾಗಿದೆ. ಅದು ಆಗಬಾರದು ಅಂತಾ ನಾವೂ ಈ ರೀತಿ ನಿರ್ಬಂಧ ಮಾಡುತ್ತೇವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಮುಂದಿನ ಸುದ್ದಿ
Show comments