Publish Date: Wed, 09 Feb 2022 (16:58 IST)
Updated Date: Wed, 09 Feb 2022 (19:00 IST)
ಬೆಂಗಳೂರು : ಶಾಲಾ ಕಾಲೇಜ್, ಶಿಕ್ಷಣ ಸಂಸ್ಥೆಗಳ ಗೇಟ್ನಿಂದ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಭೆ ಸಮಾರಂಭ, ಪ್ರತಿಭಟನೆ ಮಾಡದಂತೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇ ದಿನೇ ಕಾಲೇಜುಗಳಲ್ಲಿ ಹಿಜಬ್ ಹಾಗೂ ಕೇಸರಿ ಶಾಲು ಗಲಾಟೆ ಹೆಚ್ಚುತ್ತಿರುವುದರ ಹಿನ್ನೆಲೆಯಲ್ಲಿ ಎರಡು ವಾರಗಳ ಕಾಲ ಈ ಮಹತ್ವದ ಆದೇಶ ಹೊರಡಿಸಲಾಗಿದೆ.
ಶಿಕ್ಷಣ ಸಂಸ್ಥೆಗಳ ಗೇಟ್ನಿಂದ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಭೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಅಷ್ಟೇ ಅಲ್ಲದೇ ಆಂದೋಲನಗಳು ಅಥವಾ ಪ್ರತಿಭಟನೆಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಎರಡು ವಾರಗಳವರೆಗೆ ನಿಷೇಧಿಸಲಾಗಿದೆ ಎಂದು ಸೂಚನೆ ನೀಡಿದರು.