Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯ ಬಿಜೆಪಿ ಈಗಿಂದಲೇ ತಯಾರಿ ಆರಂಭಿಸಿದೆ. ಮೊನ್ನೆಯಷ್ಟೇ ಆರ್ ಎಸ್ಎಸ್ ನಾಯಕರನ್ನು ಭೇಟಿ ಮಾಡಿದ್ದ ನಾಯಕರು ಇದೀಗ ಇನ್ನೊಂದು ಹೆಜ್ಜೆಯಿಟ್ಟಿದ್ದಾರೆ.
ಜೂನ್ 29 ರಂದು ಬೆಂಗಳೂರಿನಲ್ಲಿ ಬಿಜೆಪಿ ಬೃಹತ್ ಕಾರ್ಯಕಾರಿಣಿ ಹಮ್ಮಿಕೊಂಡಿದ್ದು, ಇದರಲ್ಲಿ ಲೋಕಸಭೆ ಚುನಾವಣೆಗೆ ಬೇಕಾದ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಯಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಕಾರ್ಯಕಾರಿಣಿ ನಡೆಯಲಿದ್ದು, ಹಾಲಿ, ಮಾಜಿ ಸಂಸದರು, ಶಾಸಕರು, ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ನಾಯಕರು ಭಾಗವಹಿಸಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.