ಪ್ರಯಾಣಿಕರಿಗೆ ಬಂಪರ್ ಸುದ್ದಿ!

Webdunia
ಸೋಮವಾರ, 15 ನವೆಂಬರ್ 2021 (15:48 IST)
ಕೋವಿಡ್ ಪ್ರೇರಿತ ಬಿಕ್ಕಟ್ಟಿನಿಂದಾಗಿ ಈ ಮಾರ್ಗದಲ್ಲಿ ಪ್ರಯಾಣ ದರವನ್ನು ಹೆಚ್ಚಿಸಿದ್ದ ಸೌತ್ ವೆಸ್ಟರ್ನ್ ರೈಲ್ವೇ ಈಗ ಟಿಕೆಟ್ ದರವನ್ನು ಇಳಿಸಲು ನಿರ್ಧರಿಸಿದೆ.
ಇನ್ಮುಂದೆ ಬೆಂಗಳೂರು-ಮೈಸೂರು ನಡುವೆ ಪ್ರತಿದಿನ 42 ರೈಲುಗಳು ಸಂಚರಿಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋವಿಡ್ ವೇಳೆ ಏಕಾಏಕಿ ಏರಿಕೆಯಾಗಿದ್ದ ಟಿಕೆಟ್ ದರಗಳು ಪ್ರಯಾಣಿಕರಿಗೆ ದುಬಾರಿಯಾಗಿದ್ದವು. ವಿಶೇಷ ರೈಲುಗಳು ಮತ್ತು ಹಬ್ಬದ ಋತುವಿನಲ್ಲಿ SWR ನಿಂದ ಪ್ರಯಾಣಿಸಲು 145 ರೂಪಾಯಿಯಿಂದ 385 ರೂ .ವರೆಗೆ ಹಣ ನೀಡಬೇಕಾಗಿತ್ತು. ಆದರೆ ಈಗ ಪ್ರಯಾಣಿಕರು ಬೆಂಗಳೂರು-ಮೈಸೂರು ರೈಲಿನಲ್ಲಿ ಕಾಯ್ದಿರಿಸದ ಟಿಕೆಟನ್ನು ಕೇವಲ 65 ರೂ.ಗೆ ಖರೀದಿಸಬಹುದು.
ಕೇವಲ ಟಿಕೆಟ್ ದರಗಳ ಕಡಿತ ಮಾತ್ರವಲ್ಲ ಮತ್ತೊಂದು ಸುದ್ದಿಯೂ ಪ್ರಯಾಣಿಕರಿಗೆ ಸಂತಸ ತಂದಿದೆ. ಸಾಂಕ್ರಾಮಿಕ ರೋಗದ ಮೊದಲು ಇದ್ದಂತೆ, SWR ಎರಡು ನಗರಗಳ ನಡುವೆ ಪ್ರತಿದಿನ ಸಂಚರಿಸುತ್ತಿದ್ದ ಎಲ್ಲಾ 51 ರೈಲುಗಳ ಕಾರ್ಯಾಚರಣೆಯನ್ನು ಪುನರಾರಂಭಿಸಲು ನಿರ್ಧರಿಸಿದ್ದಾರೆ.
ಪ್ರಯಾಣಿಕರು ಈ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ಎರಡು ನಗರಗಳ ನಡುವೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ರೈಲುಗಳ ವಿವರಗಳನ್ನು ಒಳಗೊಂಡ ವೇಳಾಪಟ್ಟಿಯನ್ನು ಪ್ರಕಟಿಸಬೇಕು ಎಂದು ಬೆಂಗಳೂರು-ಮೈಸೂರು ರೈಲುಗಳ ಸಾಮಾನ್ಯ ಪ್ರಯಾಣಿಕರು ಮನವಿ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments