Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಪಿಎಸ್ಐ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಮೇಲೆ ಹೈಕೋರ್ಟ್ ಗರಂ ಆಗಿದೆ.
ನೀವೇ ಸರಿಯಾಗಿ ಕೆಲಸ ಮಾಡ್ತಿರೋ? ಅಥ್ವಾ ಬೇರೆ ತನಿಖಾ ಸಂಸ್ಥೆಗೆ ಪ್ರಕರಣವನ್ನು ವಹಿಸಬೇಕಾ ಎಂದು ಖಡಕ್ಕಾಗಿ ಪ್ರಶ್ನಿಸಿದೆ.
ಇದು ಸಮಾಜಕ್ಕೆ ಒಂದು ರೀತಿಯಲ್ಲಿ ಭಯೋತ್ಪಾದನಾ ಕೃತ್ಯ. ಕೆಲವು ಕ್ರಿಮಿನಲ್ಸ್ ಕೂಡ ರ್ಯಾಂಕ್ ಪಡೆದು ಹುದ್ದೆ ಪಡೆಯುತ್ತಿದ್ದಾರೆ. ಪರೀಕ್ಷೆ ರದ್ದು ಮಾಡುವುದು ಮಾತ್ರ ಪರಿಹಾರ ಅಲ್ಲ.
ಇದರಲ್ಲಿ ಯಾವುದೇ ಮಿನಿಸ್ಟರ್ ಇದ್ರೂ ಸರಿ, ಅಧಿಕಾರಿಗಳು ಇದ್ರೂ ಸರಿ ಕ್ರಮ ಆಗಬೇಕು. ನಮಗೆ ಡಿಜಿಪಿ ಸಂಧು ಅವರ ಮೇಲೆ ಗೌರವ ಇದೆ. ಅವರ ಮೇಲ್ವಿಚಾರಣೆಯಲ್ಲಿ ತನಿಖೆ ಆಗಲಿ. ನಿಮಗೆ ಸ್ವತಂತ್ರವಾದ ಅಧಿಕಾರವನ್ನು ಕೊಟ್ಟಿದ್ದೇವೆ ಎಂದು ಹೈಕೋರ್ಟ್ ತಿಳಿಸಿದೆ.