ನಾಳೆಯಿಂದ ತರಗತಿ ಆರಂಭ : ನಾಗೇಶ್

Webdunia
ಭಾನುವಾರ, 13 ಫೆಬ್ರವರಿ 2022 (15:10 IST)
ಹಾಸನ : ನಾಳೆಯಿಂದ ಒಂಬತ್ತು ಮತ್ತು ಹತ್ತನೇ ತರಗತಿ ಆರಂಭವಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿಸಿ.ನಾಗೇಶ್ ತಿಳಿಸಿದ್ದಾರೆ.

ಹಿಜಬ್ ಮತ್ತು ಕೇಸರಿ ಶಾಲಿನ ವಿವಾದ ಜೋರಾಗುತ್ತಲೇ ಸರ್ಕಾರ ಶಾಲಾ, ಕಾಲೇಜಿಗೆ ರಜೆ ಘೋಷಣೆ ಮಾಡಿತ್ತು. ಇದೀಗ ನಾಳೆಯಿಂದ ಒಂಬತ್ತು ಮತ್ತು ಹತ್ತನೇ ತರಗತಿ ಆರಂಭವಾಗುತ್ತಿದ್ದು ಸೋಮವಾರ ನಡೆಯುವ ಸಿಎಂ ಸಭೆಯ ನಂತರ ಪಿಯುಸಿ ಹಾಗೂ ಪದವಿ ತರಗತಿಗಳನ್ನು ತೆರೆಯುವ ಬಗ್ಗೆ ಯೋಚನೆ ಮಾಡಿ ಸದ್ಯದಲ್ಲಿಯೇ ಈ ಬಗ್ಗೆ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ.

ಇದೇ ವೇಳೆ ಹಿಜಬ್ ಯೂನಿಫಾರ್ಮ್ ಅಂಗ ಅಲ್ಲ. ಯಾವ ಕಾರಣಕ್ಕೆ ಆ ಹೆಣ್ಣುಮಕ್ಕಳು ಆ ರೀತಿ ವರ್ತನೆ ಮಾಡಿದರು ಅರ್ಥ ಆಗುತ್ತಿಲ್ಲ. ಈ ಹಿಜಬ್ ವಿವಾದದ ಹಿಂದೆ ಕೆಲ ಮುಸ್ಲಿಂ ಸಂಘಟನೆಗಳ ಕೈವಾಡ ಇದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಎಲ್ಲ ಹೊರಬರಲಿದೆ ಎಂದಿದ್ದಾರೆ. 

ಒಟ್ಟಾರೆ ವಿದ್ಯಾ ದೇಗುಲದಲ್ಲಿ ಹಿಜಬ್ ಮತ್ತು ಕೇಸರಿ ಶಾಲಿನ ಗಲಾಟೆ ಆರಂಭವಾಗಿ ಶಿಕ್ಷಣ ವ್ಯವಸ್ಥೆಗೆ ಸಮಸ್ಯೆಯಾಗತೊಡಗಿತ್ತು. ಈ ಹಿನ್ನೆಲೆಯಲ್ಲಿ ಶಾಲಾ, ಕಾಲೇಜಿಗೆ ರಜೆ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನ ಮಾಡಲಾಗಿತ್ತು. ಇದೀಗ ನಾಳೆಯಿಂದ ಮತ್ತೆ ಒಂಬತ್ತು ಹತ್ತನೇ ತರಗತಿ ಆರಂಭವಾಗುತ್ತಿದ್ದು, ಇದಕ್ಕೆ ಪೋಷಕರು ಮತ್ತು ವಿದ್ಯಾರ್ಥಿಗಳು ಯಾವ ರೀತಿ ಸಹಕರಿಸುತ್ತಾರೆ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಯುಗಾದಿ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ: ಕೋಡಿಶ್ರೀಗಳ ಶಾಕಿಂಗ್ ಭವಿಷ್ಯ

ರೀಲ್ಸ್ ಗಾಗಿ ಪುಟಾಣಿ ಮಗುವಿಗೆ ಸಿಗರೇಟ್, ಬಿಯರ್ ಕೊಟ್ಟ ಯುವಕ: Video

ಮುಂದಿನ ಸುದ್ದಿ
Show comments