Webdunia - Bharat's app for daily news and videos

Install App

ಇಂದು ಸಿಎಂ ಕುಮಾರಸ್ವಾಮಿಗೆ ವಿಶ್ವಾಸ ಪರೀಕ್ಷೆ

Webdunia
ಶುಕ್ರವಾರ, 25 ಮೇ 2018 (09:01 IST)
ಬೆಂಗಳೂರು: ಮೊನ್ನೆಯಷ್ಟೇ ಅಸ್ಥಿತ್ವಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಇಂದು ವಿಶ್ವಾಸಮತ ಯಾಚನೆಯ ಅಗ್ನಿಪರೀಕ್ಷೆ ಎದುರಾಗಿದೆ.

ಆದರೆ ಸಾಕಷ್ಟು ಸಂಖ್ಯಾಬಲ ಹೊಂದಿರುವುದರಿಂದ ಸಿಎಂ ಕುಮಾರಸ್ವಾಮಿಗೆ ಸೋಲಿನ ಭೀತಿ ಇಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳ ಸದಸ್ಯರಲ್ಲದೆ ಪಕ್ಷೇತರರ ಬೆಂಬಲವೂ ಸಮ್ಮಿಶ್ರ ಸರ್ಕಾರಕ್ಕಿದೆ. ಹೀಗಾಗಿ 224 ಸದಸ್ಯ ಬಲವುಳ್ಳ ಸದನದಲ್ಲಿ ಬಹುಮತ ಸಾಬೀತಿಗೆ ಅಗತ್ಯವಿರುವ 111 ಸದಸ್ಯರ ಬೆಂಬಲ ಸರ್ಕಾರಕ್ಕೆ ಸುಲಭವಾಗಿ ಸಿಗಲಿದೆ. ಈಗಾಗಲೇ ಎರಡೂ ಪಕ್ಷಗಳ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದ್ದು, ಅಡ್ಡಮತದಾನದ ಭೀತಿಯೂ ಇಲ್ಲ.

ಇಂದು ಮಧ್ಯಾಹ್ನ 12.15 ರ ನಂತರ ಕಲಾಪ ನಡೆಯಲಿದ್ದು, ಸಿಎಂ ಕುಮಾರಸ್ವಾಮಿ ಪ್ರಸ್ತಾವನೆ ಸಲ್ಲಿಸಿ ಮತಕ್ಕೆ ಹಾಕಲಿದ್ದಾರೆ. ಬಳಿಕ ವಿಶ್ವಾಸಮತ ನಡೆಯಲಿದೆ. ಇದಕ್ಕೂ ಮೊದಲು ಸ್ಪೀಕರ್ ಆಯ್ಕೆ ಪ್ರಕ್ರಿಯೆಯೂ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments