Webdunia - Bharat's app for daily news and videos

Install App

ದೇಶಾದ್ಯಂತ ವಿದ್ಯುತ್‌ಗೆ ಬರ..!?

Webdunia
ಶನಿವಾರ, 30 ಏಪ್ರಿಲ್ 2022 (09:43 IST)
ನವದೆಹಲಿ :  ಬೇಸಿಗೆಯ ಪ್ರತಾಪ ಹೆಚ್ಚಾಗುತ್ತಿದ್ದಂತೆ ದೇಶಾದ್ಯಂತ ವಿದ್ಯುತ್ತಿಗೆ ಭಾರಿ ಬೇಡಿಕೆ ವ್ಯಕ್ತವಾಗತೊಡಗಿದೆ.
 
ಬೇಡಿಕೆಯಷ್ಟು ವಿದ್ಯುತ್ ಪೂರೈಸಲು ಪರದಾಡುತ್ತಿರುವ ರಾಜ್ಯ ಸರ್ಕಾರಗಳು ತಾಸುಗಟ್ಟಲೆ ಲೋಡ್ಶೆಡ್ಡಿಂಗ್ ಘೋಷಣೆ ಮಾಡಿವೆ. ಜಮ್ಮು-ಕಾಶ್ಮೀರದಿಂದ ತಮಿಳುನಾಡಿನವರೆಗೆ ಬಹುತೇಕ ರಾಜ್ಯಗಳಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆಟ ಶುರುವಾಗಿದೆ.

2ರಿಂದ 8 ತಾಸಿನವರೆಗೆ ವಿದ್ಯುತ್ ಕೈಕೊಡುತ್ತಿದೆ. ಗುಜರಾತ್, ಆಂಧ್ರಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬೇಡಿಕೆಯಷ್ಟು ವಿದ್ಯುತ್ ಸಿಗದ ಕಾರಣ ಕೈಗಾರಿಕೆಗಳಿಗೂ ವಿದ್ಯುತ್ ಕಡಿತ ಮಾಡಲಾಗುತ್ತಿದೆ.

ಕಲ್ಲಿದ್ದಲು ಸರಬರಾಜಿನಲ್ಲಿ ಆಗುತ್ತಿರುವ ವ್ಯತ್ಯಯದಿಂದಲೂ ವಿದ್ಯುತ್ ಉತ್ಪಾದನೆಗೆ ಸಮಸ್ಯೆಯಾಗಿದೆ. ದೇಶದ ಒಟ್ಟು ವಿದ್ಯುತ್ ಉತ್ಪಾದನೆಯಲ್ಲಿ ಶೇ.70ರಷ್ಟಕ್ಕೆ ಕಲ್ಲಿದ್ದಲು ಬೇಕು. ಕಲ್ಲಿದ್ದಲಿನ ಪೂರೈಕೆಯಿಂದ ಸಮಸ್ಯೆಯಾಗಿದೆ ಎಂದು ರಾಜ್ಯಗಳು ಹೇಳುತ್ತಿವೆಯಾದರೂ, ಬೇಡಿಕೆಗೆ ತಕ್ಕಷ್ಟುಕಲ್ಲಿದ್ದಲು ಅಗತ್ಯವಿದೆ ಎಂದು ಸರ್ಕಾರ ಹೇಳುತ್ತಿದೆ.

ಕಲ್ಲಿದ್ದಲು ಸಾಗಣೆಗೆ ಅಗತ್ಯವಿರುವ ರೈಲು ಬೋಗಿಗಳ ಕೊರತೆಯಿಂದಾಗಿ ಸಮಸ್ಯೆ ಉಲ್ಬಣಿಸಿದೆ ಎನ್ನಲಾಗಿದೆ. ಇದರ ಜತೆಗೆ ಉಕ್ರೇನ್ ಯುದ್ಧದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂಧನ ಬೆಲೆ ದುಬಾರಿಯಾಗಿ, ಕಲ್ಲಿದ್ದಲು ಆಮದು ಕೂಡ ಕುಸಿದಿರುವುದು ಸಮಸ್ಯೆಗೆ ಕೊಡುಗೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments