ಮುಸ್ಲಿಂರ ಓಲೈಸಲು ಯಡವಟ್ಟು ಮಾಡಿಕೊಂಡ ರಹೀಮ್ ಖಾನ್

Webdunia
ಬುಧವಾರ, 2 ಮೇ 2018 (17:04 IST)
ಮುಸ್ಲಿಂ ಮತ ಓಲೈಕೆ ಮಾಡಿಕೊಳ್ಳಲು ಹೋಗಿ ಬೀದರ್ ಉತ್ತರ ಕ್ಷೇತ್ರದ ಕೈ ಅಭ್ಯರ್ಥಿ ರಹೀಂ ಖಾನ್ ಯಡವಟ್ಟು ಮಾಡಿಕೊಂಡಿದ್ದಾರೆ. 
ರಾಜ್ಯಸಭಾ ವಿರೋಧ ಪಕ್ಷದ ನಾಯಕ ಗುಲಾಬ್ ನಬಿ ಆಜಾದ್, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸಮ್ಮುಖದಲ್ಲೆ ಯಡವಟ್ಟು ನಡೆದಿದೆ. ಮುಸ್ಲಿಂ ವೋಟ್ ಹೆಚ್ಚು ಇರುವುದ್ರಿಂದ ನನಗೆ ಬೀದರ್ ಉತ್ತರ ಕ್ಷೇತ್ರದ ಟಿಕೆಟ್ ನೀಡಿದ್ದಾರೆ. ಇಲ್ಲದಿದ್ದರೆ ಜೀವನದಲ್ಲೆ ನನಗೆ ಟಿಕೆಟ್ ಸಿಗುತ್ತಿರಲಿಲ್ಲ. ಕೇವಲ ಮುಸ್ಲಿಂ ಮತದಾರರಿಂದ ನನ್ನ ಗೆಲುವು ಸಾಧ್ಯ. ಆದ್ದರಿಂದ ನೀವು ನನ್ನನ್ನು ಗೆಲ್ಲಿಸಬೇಕು. ನಾನು ಸೋತರೆ ಅದು ಮುಸ್ಲಿಂ ಸಮಾಜಕ್ಕೆ ಮಾಡಿದ ಅವಮಾನ ಎಂದಿದ್ದಾರೆ ರಹೀಂ ಖಾನ್. ರಹೀಂ ಖಾನ್ ಗೆ ಮುಸ್ಲೀಂ ಮತಗಳು ಮಾತ್ರ ಬೇಕಾ‌..?ಹಾಗಾದ್ರೆ ಬೇರೆ ಸಮಾಜದ ಮತ ಬೇಡವಾಯ್ತಾ ರಹೀಂ ಖಾನ್ ಗೆ..? ಎಂಬ ಪ್ರಶ್ನೆ ಎದುರಾಗಿದೆ. 
 
ಮೋಘಲ್ ಗಾರ್ಡನ್ ನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ನೀಡಿದ ಹೇಳಿಕೆ ಬೀದರ್ ವಿಧಾನಸಭಾ ಕ್ಷೇತ್ರದಾದ್ಯಂತ ಮತದಾರರ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಚುನಾವಣೆ ಆಯೋಗ ಎಸ್ಐಆರ್ ಮಾಡುವಾಗ ರಾಜ್ಯ ಆಯೋಗದಿಂದ ಪ್ರತ್ಯೇಕ ಯಾಕೆ: ಛಲವಾದಿ ನಾರಾಯಣಸ್ವಾಮಿ

ಮನೆಯ ಮಹಡಿಯಿಂದ ಐಸ್ ಕ್ರೀಂಗಾಗಿ ಬಾಗಿದ ವ್ಯಕ್ತಿ: ನಂತರ ನಡೆದ ಈ ಆಘಾತಕಾರಿ ಘಟನೆಯ ವಿಡಿಯೋ ನೋಡಿ

ಸರ್ಕಾರಿ ಬಸ್ ನಲ್ಲಿ ಸಾಮಾನ್ಯರಂತೇ ಸಂಚಾರ ಮಾಡಿದ ಸಿಎಂ ವಿಜಯ್ Video

ಆರು ಮದುವೆಯಾಗಿ ಗಂಡನ ಕಿರುಕುಳ ಎಂದು ದುಡ್ಡು ಪಡೆದ ಯುವತಿ ಏಳನೇ ಬಾರಿ ಕೋರ್ಟ್ ಗೆ ಬಂದಾಗ ಜಡ್ಜ್ ಏನು ಹೇಳಿದ್ರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments