Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಅಧಿಕಾರ ಉಳಿಸಿಕೊಳ್ಳಲು ಕೊನೇ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಜೆಡಿಎಸ್ ಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದಾರೆ.
ಸಿದ್ದರಾಮಯ್ಯ ನಿವಾಸದಲ್ಲಿ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್, ಗುಲಾಂ ನಬಿ ಆಜಾದ್ ಮುಂತಾದವರು ಸಭೆ ಸೇರಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಯಾರಿಗೂ ಸ್ಪಷ್ಟ ಬಹುಮತ ಬಾರದೇ ಇದ್ದರೆ ಜೆಡಿಎಸ್ ಜತೆಗೆ ಮೈತ್ರಿ ಸರ್ಕಾರ ನಡೆಸಬಹುದು. ನಾವು ಬೆಂಬಲ ಕೊಡ್ತೀವಿ. ನೀವೇ ಮುಖ್ಯಮಂತ್ರಿ ಆಗಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಗೆ ಬಂಪರ್ ಆಫರ್ ನೀಡಲು ಕಾಂಗ್ರೆಸ್ ಮುಂದಾಗಿದೆ. ಹಾಗಾಗಿ ಬಿಜೆಪಿ ಮುನ್ನಡೆಯಲ್ಲಿದ್ದರೂ, ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಬಂದರೂ ಅಚ್ಚರಿಯಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.