Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ರೇಸ್ ಕೋರ್ಸ್ನಲ್ಲಿ ನಡೆಯುವ ಡರ್ಬಿ ರೇಸ್ನಲ್ಲಿ ಸಾವಿರಾರು ಜನ ಸೇರುತ್ತಿರುವ ಬಗ್ಗೆ ಕಾಂಗ್ರೆಸ್ ಪಕ್ಷದವರು ಆಕ್ಷೇಪ ಎತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು,
ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿಸಲು ಯಾವುದೇ ಅವಕಾಶವಿರುವುದಿಲ್ಲ. ಕೋವಿಡ್ ಮಾರ್ಗಸೂಚಿಗಳ ಕಡ್ಡಾಯ ಪಾಲನೆ ಆಗಬೇಕು. ಮಾರ್ಗಸೂಚಿಗಳ ಉಲ್ಲಂಘನೆಯಾಗಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಬಿಬಿಎಂಪಿ ಸಭೆಗಳನ್ನು ನಡೆಸುವ ಮೂಲಕ ಬೆಂಗಳೂರಿನ ಬಿಜೆಪಿಗೆ ಅನುಕೂಲವಾಗಲು ಹಾಗೂ ಅನುದಾನ ನೀಡಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ಪಕ್ಷದ ಆರೋಪಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಪಕ್ಷ ಇರುವುದೇ ಆರೋಪ ಮಾಡಲು.
ಅವರ ಸರ್ಕಾರ ಇದ್ದಾಗ ಏನೆಲ್ಲಾ ಮಾಡಿದ್ದರು ಎನ್ನುವುದನ್ನು ಅವರು ನೆನಪಿಸಿಕೊಳ್ಳಬೇಕು ಎಂದು ತಿರುಗೇಟು ನೀಡಿದರು.