ಅಲ್ಲೋಲಕಲ್ಲೋಲ ಸೃಷ್ಟಿಸಿದ ಸೈಕ್ಲೋನ್!

Webdunia
ಶನಿವಾರ, 17 ಜೂನ್ 2023 (09:52 IST)
ಗಾಂಧಿನಗರ : ಬಿಪರ್ ಜಾಯ್ ಚಂಡಮಾರುತ ಗುಜರಾತ್ನಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಗುರುವಾರ ಮಧ್ಯರಾತ್ರಿ ನಂತರ ಸೈಕ್ಲೋನ್ ಕಛ್ ಬಳಿ ತೀರವನ್ನು ಪೂರ್ಣಪ್ರಮಾಣದಲ್ಲಿ ದಾಟಿದ್ದು, ಕ್ರಮೇಣ ದುರ್ಬಲಗೊಳ್ತಿದೆ.

ಸದ್ಯ ಚಂಡಮಾರುತ ಈಶಾನ್ಯ ದಿಕ್ಕಿನಲ್ಲಿ ಕರಾಚಿಯತ್ತ ತೆರಳುತ್ತಿದೆ. ಯಾವುದೇ ಕ್ಷಣದಲ್ಲಿ ಇದು ವಾಯುಭಾರ ಕುಸಿತವಾಗಿ ಬದಲಾಗಲಿದೆ. ಬಿಪರ್ ಜಾಯ್ ತೀರ ದಾಟುವ ಸಂದರ್ಭದಲ್ಲಿ 140 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಿದೆ.

ಬಿರುಗಾಳಿ ಸಹಿತ ಭಾರೀ ಮಳೆ ದೊಡ್ಡ ಮಟ್ಟದಲ್ಲಿ ಅನಾಹುತ ಸೃಷ್ಟಿಸಿದೆ. ಅನೇಕ ಕಡೆ ಸಾವಿರಾರು ಮರಗಿಡಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. 500ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ ಕಾರ್ಯಕ್ರಮವೊಂದಕ್ಕೆ ಹಾಕಿದ್ದ ಬೃಹತ್ ಟೆಂಟ್ ಧರಾಶಾಯಿಯಾಗಿದೆ.

ಮನೆ ಶೀಟ್ಗಳು, ಹೋರ್ಡಿಂಗ್ಗಳು ತರಗೆಲೆಯಂತೆ ಹಾರಿವೆ. 1000 ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕೆಲವೆಡೆ ದಿಢೀರ್ ಪ್ರವಾಹ ಸೃಷ್ಟಿಯಾಗಿ ತಗ್ಗು ಪ್ರದೇಶಗಳೆಲ್ಲಾ ಜಲಮಯವಾಗಿವೆ. ಮಾಂಡ್ವಿಯಲ್ಲಿ ಹಲವು ಮನೆ, ಆಸ್ಪತ್ರೆಗಳಿಗೆ ನೀರು ನುಗ್ಗಿದೆ. ರಸ್ತೆಗಳಲ್ಲಿ ಸಂಚಾರ ಬಂದ್ ಆಗಿದೆ. ನಿನ್ನೆಯಿಂದ ನೂರಕ್ಕೂ ಹೆಚ್ಚು ರೈಲು ಬಂದ್ ಆಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

Video: ಜೋಡೆತ್ತು ಎಂದರೆ ಹೀಗಿರಬೇಕು.. ಜೊತೆಗಾರ ಎತ್ತು ಸತ್ತಿದ್ದಕ್ಕೆ ಜೋಡಿ ಎತ್ತು ಮಾಡಿದ್ದು ನೋಡಿದ್ರೆ ಕಣ್ಣೀರು ಬರುತ್ತೆ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಭಾರೀ ಮಳೆ

ಮುಂದಿನ ಸುದ್ದಿ
Show comments