Webdunia - Bharat's app for daily news and videos

Install App

ಬಜೆಟ್ ಅನುಷ್ಠಾನದಲ್ಲಿ ವಿಳಂಬ ಸಹಿಸಲ್ಲ : ಸಿಎಂ

Webdunia
ಬುಧವಾರ, 11 ಮೇ 2022 (13:20 IST)
ಬೆಂಗಳೂರು : ನನ್ನ ಸರ್ಕಾರ ಬಜೆಟ್ ಘೋಷಿತ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬ ಧೋರಣೆ ಸಹಿಸುವುದಿಲ್ಲ.

ನೀವೆಲ್ಲರೂ ನನ್ನ (ರಡಾರ್) ಕಣ್ಗಾವಲಿನಲ್ಲಿ ಇದ್ದೀರಿ. ನಿಮ್ಮೆಲ್ಲರನ್ನು ನಾನು ಗಮನಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಬೆಂಗಳೂರಿನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಸಿಇಒಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನೀವೆಲ್ಲರೂ ಯುವಕರಿದ್ದೀರಿ.

ಒಳ್ಳೆಯ ಕೆಲಸ ಮಾಡಲು ದೇವರು ನಿಮಗೆ ಇದೊಂದು ಅವಕಾಶ ನೀಡಿದ್ದಾನೆ. ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು. 
ಬಡವರ, ದೀನ ದಲಿತರ ಪರವಾದ ಕೆಲಸಗಳನ್ನು ಮಾಡಿ. ನವ ಭಾರತಕ್ಕಾಗಿ ನವ ಕರ್ನಾಟಕ ನಿರ್ಮಾಣದಲ್ಲಿ ನಿಮ್ಮ ಕೊಡುಗೆಯನ್ನು ನೀಡಿ. ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡೋಣ. ನಾನು ನಿಮ್ಮ ಜೊತೆ ಇದ್ದೇನೆ. ಆದರೆ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಮತ್ತು ಭ್ರಷ್ಟಾಚಾರವನ್ನು ಎಂದೂ ಸಹಿಸುವುದಿಲ್ಲ.

ಅದಕ್ಕೆ ಅವಕಾಶವನ್ನೂ ಮಾಡಿಕೊಡುವುದಿಲ್ಲ. ಈ ಮಾತುಗಳನ್ನು ನೀವು ಸ್ಪಷ್ಟವಾಗಿ ನೆನಪಿನಲ್ಲಿಟ್ಟುಕೊಂಡು ಕೆಲಸ ಮಾಡಿ ಎಂದು ಸಿಎಂ ಸೂಚನೆ ನೀಡಿದರು.

ವ್ಯವಸ್ಥೆ ಮೇಲಿನ ವಿಶ್ವಾಸವನ್ನು ಪುನರ್ ಸ್ಥಾಪಿಸೋಣ. ನಿಮ್ಮ ಕಾರ್ಯವೈಖರಿಯನ್ನು ಗಮನಿಸಲಾಗುತ್ತದೆ. ಸಾರ್ವಜನಿಕರು ತರುವ ಅರ್ಜಿಗಳಿಗೆ ಪರಿಹಾರ ಕೊಡುವ ಕೆಲಸವಾಗಬೇಕು. ನಿಮ್ಮ ಕಾರ್ಯದಲ್ಲಿ ನಿಖರತೆ ಇರಲಿ. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಸೂಚಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಜನರ ಋಣ ತೀರಿಸಲು ಆರನೇಯ ಭೂ ಗ್ಯಾರಂಟಿ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

Covid 19: ಮತ್ತೆ ಶುರುವಾಯ್ತು ಕೊರೋನಾ ಹಾವಳಿ: ಈಗ ಬಂದಿರುವ ಹೊಸ ವೈರಸ್ ಯಾವುದು

ಮುಂದಿನ ಸುದ್ದಿ
Show comments