ಬೆಸ್ಕಾಂ ವ್ಯಾಪ್ತಿಯ ವಿದ್ಯುತ್ ಅದಾಲತ್

Webdunia
ಭಾನುವಾರ, 19 ಜೂನ್ 2022 (11:44 IST)
ಬೆಂಗಳೂರು : ಗ್ರಾಮೀಣ ಭಾಗದ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಪರಿಹಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಗ್ರಾಹಕರಿಗೆ ಮಾಹಿತಿ ನೀಡಲು ‘ವಿದ್ಯುತ್ ಅದಾಲತ್’ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 104 ಹಳ್ಳಿಗಳಲ್ಲಿ ಶನಿವಾರ(ಜೂನ್ 18) ನಡೆಯಲಿದೆ.

ಬೆಸ್ಕಾಂನ ಆಡಳಿತ ನಿರ್ದೇಶಕರಿಂದ ಹಿಡಿದು ಹಿರಿಯ ಅಧಿಕಾರಿಗಳು ವಿದ್ಯುತ್ ಅದಾಲತ್ನಲ್ಲಿ ಖುದ್ದು ಭಾಗವಹಿಸಿ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಸೂಚಿಸಲಿದ್ದಾರೆ. ಇದರೊಂದಿಗೆ ಕಾಲಮಿತಿಯಲ್ಲಿ ವಿದ್ಯುತ್ ಸಮಸ್ಯೆಗಳಿಗೆ ಪರಿಹಾರವನ್ನೂ ಒದಗಿಸಲಿದ್ದಾರೆ.

ಗ್ರಾಮೀಣ ಭಾಗದ ಜನರ ವಿದ್ಯುತ್ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು ಎನ್ನುವ ಸದುದ್ದೇಶದಿಂದ ಪ್ರತಿ ತಿಂಗಳ ಮೂರನೇ ಶನಿವಾರ ವಿದ್ಯುತ್ ಅದಾಲತ್ ನಡೆಸಲು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಎಲ್ಲಾ ಎಸ್ಕಾಂಗಳಿಗೆ ಸೂಚಿಸಿದ್ದರು. 

ವಿದ್ಯುತ್ ಸಂಬಂಧಿತ ಕುಂದು-ಕೊರತೆಗಳನ್ನು ಆಲಿಸಿ ಅದಕ್ಕೆ ಸ್ಥಳದಲ್ಲೇ ಪರಿಹಾರ ಸೂಚಿಸುವುದು ಅಥವ ನಿಗದಿತ ಕಾಲಮಿತಿಯೊಳಗೆ ನಿವಾರಿಸುವ ಉದ್ದೇಶದಿಂದ ಎಲ್ಲಾ ಎಸ್ಕಾಂಗಳಲ್ಲಿ ಅದಾಲತ್ ಏಕಕಾಲದಲ್ಲಿ ನಡೆಯಲಿದೆ.

ಬೆಸ್ಕಾಂ ವ್ಯಾಪ್ತಿಯ 104 ಹಳ್ಳಿಗಳಲ್ಲಿ ಶನಿವಾರ ಅದಾಲತ್ ನಡೆಯಲಿದ್ದು, ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಬೆಸ್ಕಾಂನ ಮುಖ್ಯ ಪ್ರಧಾನ ವ್ಯವಸ್ಥಾಪಕ(ಆಪರೇಷನ್ಸ್) ಎಂ.ಎಲ್ ನಾಗರಾಜು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮವಾಗಿ ಮತಪಟ್ಟಿ ಪರಿಷ್ಕರಣೆ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲು ಮುಂದಾದ ಬಿಜೆಪಿ

ದೆಹಲಿ ಮೆಟ್ರೋದಲ್ಲಿ ಸಾರ್ವಜನಿಕವಾಗಿಯೇ ಯುವ ಜೋಡಿಯ ರೊಮ್ಯಾನ್ಸ್: ನೆಟ್ಟಿಗರ ಆಕ್ರೋಶ Video

Shocking video: ಮೀರತ್ ನ ಮುಸ್ಕಾನ್ ನನ್ನೂ ಮೀರಿಸಿದ ಮಹಿಳೆ: ಗಂಡನನ್ನು ಕೊಂದು ಶವ ಎಲ್ಲಿ ಹೂತು ಹಾಕಿದ್ಳು ಗೊತ್ತಾ

ಜನ್ಮದಲ್ಲಿ ಇನ್ನು ಇವರು ಕಳ್ಳತನ ಮಾಡಲ್ಲ: ಕದಿಯಲು ಬಂದವರಿಗೆ ಕಾರ್ಟೂನ್ ವೇಷ ಹಾಕಿ ಅಯ್ಯೋ ಅನಿಸಿದ್ರು Video

ರಾಮಮಂದಿರದ ಬಳಿಕ ಈಗ ಬದರಿನಾಥದಲ್ಲೂ ದೇಣಿಗೆ ಕಳ್ಳತನದ ಆರೋಪ

ಮುಂದಿನ ಸುದ್ದಿ
Show comments