ಅಕ್ಟೋಬರ್ 12ವರೆಗೆ ಮಳೆ ನಿರೀಕ್ಷೆ

Webdunia
ಶನಿವಾರ, 9 ಅಕ್ಟೋಬರ್ 2021 (07:37 IST)
ಬೆಂಗಳೂರು(ಅ.09) : ರಾಜ್ಯದಲ್ಲಿ ಮಳೆ ಆರ್ಭಟ ನಿಲ್ಲುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಸೃಷ್ಟಿಯಾಗುವ ಸಂಭವವಿದ್ದು,ಕರ್ನಾಟಕ ಸೇರಿ ಕೆಲವು ರಾಜ್ಯಗಳಲ್ಲಿ ಅಕ್ಟೋಬರ್ 12ರವರೆಗೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೇ ಉತ್ತರ ಅಂಡಮಾನ್ ಸಮುದ್ರದಲ್ಲಿ ಅಕ್ಟೋಬರ್ 10ರ ವೇಳೆಗೆ ವಾಯುಭಾರ ಕುಸಿತ ಉಂಟಾಗಲಿದ್ದು, ಇದರ ಪರಿಣಾಮ ದೇಶದ ಕೆಲವು ಭಾಗಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಪೂರ್ವ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಚಂಡಮಾರುತದ ಪರಿಚಲನೆಯಿಂದ ಆಂಧ್ರಪ್ರದೇಶದ ಕರಾವಳಿಯ ಬಳಿ ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯವರೆಗೆ ಒಂದು ಮಾನ್ಸೂನ್ ತೊಟ್ಟಿ ದಕ್ಷಿಣ ಒಳನಾಡಿನ ಕರ್ನಾಟಕ ಮತ್ತು ರಾಯಲಸೀಮಾದಾದ್ಯಂತ ವಿಸ್ತರಿಸಿದ್ದು, ಇದು ರಾಜ್ಯದಲ್ಲಿ ಹೆಚ್ಚಿನ ಮಳೆಗೆ ಕಾರಣವಾಗಿದೆ.
ಮುಂದಿನ 4-5 ದಿನಗಳಲ್ಲಿ ಪಶ್ಚಿಮದಿಂದ ವಾಯವ್ಯ ದಿಕ್ಕಿಗೆ- ದಕ್ಷಿಣ ಒಡಿಶಾ, ಆಂಧ್ರಪ್ರದೇಶ ಉತ್ತರ ಕರಾವಳಿ ಕಡೆಗೆ ಚಂಡಮಾರುತ  ಚಲನೆಯಾಗಬಹುದು ಇದರ ಪ್ರಭಾವದಿಂದಾಗಿ ಒಡಿಶಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಕೊಂಕಣ,  ಮಧ್ಯ ಮಹಾರಾಷ್ಟ್ರ, ಕರ್ನಾಟಕದ ಉತ್ತರ ಒಳನಾಡಿನಲ್ಲಿ ಹಾಗೂ ಆಂಧ್ರ ಪ್ರದೇಶ, ಕೇರಳದಲ್ಲಿ  ಮೂರು ದಿನಗಳ ಕಾಲ ಅಧಿಕ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜಾಪ್ರಭುತ್ವ, ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ: ಎಸ್ಆರ್ ವಿಶ್ವನಾಥ್

ಮಾಧ್ಯಮಗಳಿಗೆ ನಿರ್ಬಂಧ ಪ್ರಜಾಪ್ರಭುತ್ವ ವಿರೋಧಿ ನಡೆ: ಬಿವೈ ವಿಜಯೇಂದ್ರ

ಸುಮ್ಮನಿದ್ರೆ ಸರಿ, ಇಲ್ಲದಿದ್ರೆ ಅಶೋಕ್, ವಿಜಯೇಂದ್ರ, ಬಿಜೆಪಿ ಕಚೇರಿ ಮುಂದೆನೇ ಕಸ: ಡಿಕೆ ಶಿವಕುಮಾರ್ ವಾರ್ನಿಂಗ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ರಾಜ್ಯದ ಆಡಳಿತದಲ್ಲಿ ಹಿನ್ನಡೆ: ನಿಖಿಲ್ ಕುಮಾರಸ್ವಾಮಿ

ಪಾನಿಪೂರಿ ಪಾನಿಯೊಳಗಿನಿಂದ ಹಾರಿದ ಜೀವಿ ನೋಡಿದ್ರೆ ಇನ್ನು ಗೋಲ್ ಗಪ್ಪಾ ತಿನ್ನಲೂ ಭಯಪಡ್ತೀರಿ Video

ಮುಂದಿನ ಸುದ್ದಿ
Show comments