Webdunia - Bharat's app for daily news and videos

Install App

ಕರ್ನಾಟಕ ಬಂದ್ಗೆ! ಸಾ.ರಾ.ಗೋವಿಂದು ಕಿಡಿ?

Webdunia
ಶನಿವಾರ, 25 ಡಿಸೆಂಬರ್ 2021 (06:55 IST)
ಬೆಂಗಳೂರು : ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಸಂಘಟನೆಗಳು ಏಕಾಏಕಿ ಕರೆ ಕೊಟ್ಟ ಕರ್ನಾಟಕ ಬಂದ್ಗೆ ಅಪಸ್ವರ ವ್ಯಕ್ತವಾಗುತ್ತಲೇ ಇದೆ.

ಹತ್ತು ಹಲವು ಸಂಘಟನೆಗಳು ಬಂದ್ ಪರವಾಗಿಲ್ಲ. ಕೇವಲ ನೈತಿಕ ಬೆಂಬಲ ಕೊಡುತ್ತೇವೆ ಎನ್ನುತ್ತಿವೆ. ಈ ಸಾಲಿಗೆ ಈಗ ಚಿತ್ರೋದ್ಯಮ ಕೂಡ ಸೇರಿದೆ. ಮೊನ್ನೆ ಬಂದ್ ಘೋಷಣೆ ಮಾಡಿದ್ದ ಸಾರಾ ಗೋವಿಂದು, ಚಿತ್ರೋದ್ಯಮದ ಸಂಪೂರ್ಣ ಬೆಂಬಲ ಇದೆ ಎಂದು ಘೋಷಿಸಿದ್ದರು.

ಈ ಘೋಷಣೆಗೆ ಮುನ್ನ, ಫಿಲಂ ಚೇಂಬರ್ ಜೊತೆಯಾಗಲಿ, ಚಿತ್ರೋದ್ಯಮದ ಗಣ್ಯರ ಜೊತೆ ಸಾರಾ ಗೋವಿಂದು ಚರ್ಚೆ ನಡೆಸಿರಲಿಲ್ಲ. ಈ ಬೆನ್ನಲ್ಲೇ ಇಂದು ಸಭೆ ಸೇರಿದ್ದ ಫಿಲ್ಮ್ ಚೇಂಬರ್ ಬಂದ್ನಲ್ಲಿ ಚಿತ್ರೋದ್ಯಮ ಭಾಗಿ ಆಗಲ್ಲ. ಆದರೆ ಬಂದ್ಗೆ ನೈತಿಕ ಬೆಂಬಲ ಇರಲಿದೆ. ಡಿ.31ರಂದು ಚಿತ್ರರಂಗದ ಎಲ್ಲಾ ಚಟುವಟಿಕೆ ನಡೆಯಲಿವೆ ಎಂದು ಘೋಷಿಸಿತು.

ಬಂದ್ಗೆ ಚಿತ್ರೋದ್ಯಮ ಸಂಪೂರ್ಣ ಬೆಂಬಲ ನೀಡಬೇಕು ಎಂದು ಒತ್ತಾಯಿಸಿ ಫಿಲ್ಮ್ ಚೇಂಬರ್ ಮುಂದೆ ನಾಳೆ ಪ್ರತಿಭಟನೆ ನಡೆಸಲು ಕನ್ನಡ ಪರ ಸಂಘಟನೆಗಳು ತೀರ್ಮಾನಿಸಿವೆ.

ಈ ಮಧ್ಯೆ ಮೈಸೂರಲ್ಲಿ ಮಾತನಾಡಿದ ನಟ ಶಿವಣ್ಣ, ಫಿಲಂ ಚೇಂಬರ್ ನಿರ್ಧಾರಕ್ಕೆ ನಾವು ಬದ್ಧ ಎಂದು ಘೋಷಿಸಿದ್ದಾರೆ. ಪರೋಕ್ಷವಾಗಿ ಬಂದ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಜಯಕರ್ನಾಟಕ ಸಂಘಟನೆ ಬಂದ್ಗೆ ನೀಡಿದ್ದ ಬೆಂಬಲ ಹಿಂಪಡೆದಿದೆ. ಈಗಾಗಲೇ, ಕರವೇ ನಾರಾಯಣಗೌಡ ಕೂಡ ಬಂದ್ಗೆ ಬೆಂಬಲ ಇಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತೆ ನಾಲಗೆ ಹರಿಬಿಟ್ಟ ಈಶ್ವರಪ್ಪ: ಆಪರೇಷನ್ ಸಿಂಧೂರ್‌ ಟೀಕಿಸುವವರನ್ನು ಗುಂಡಿಕ್ಕಿ ಎಂದ ಮಾಜಿ ಡಿಸಿಎಂ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

ಮುಂದಿನ ಸುದ್ದಿ
Show comments