Webdunia - Bharat's app for daily news and videos

Install App

ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು ಜೆಡಿಎಸ್ ಸೇರ್ಪಡೆ

Webdunia
ಗುರುವಾರ, 26 ಏಪ್ರಿಲ್ 2018 (17:21 IST)
ಟಿಕೆಟ್ ಕೈತಪ್ಪಿದ್ದರಿಂದ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು ಇಂದು ಜೆಡಿಎಸ್ ರಾಜ್ಯಾದ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.
2008ರಲ್ಲಿ ಜೆಡಿಎಸ್ ನಿಂದಲೆ ಶಾಸಕರಾಗಿದ್ದ ಕಲ್ಪನಾ ಸಿದ್ದರಾಜು 2013ರ ವಿಧಾನಸಭಾ ಚುನಾವಣೆಯಲ್ಲಿ  ಜೆಡಿಎಸ್ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಪಕ್ಷೇತರವಾಗಿ ಸ್ಷರ್ಧಿಸಿ ಪರಾಭವಗೊಂಡಿದ್ರು. ನಂತರ  ಕಾಂಗ್ರೆಸ್ ಸೇರಿದ್ದ ಕಲ್ಪನಾ, ಈ ಬಾರಿ  ಕಾಂಗ್ರೆಸ್ ಪಕ್ಷದ ಪ್ರಬಲ ಟಿಕಟ್ ಆಕಾಂಕ್ಷಿಯಾಗಿದ್ರು. 
 
ಆದ್ರೆ ಟಿಕೆಟ್ ಲಭಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ರು. ಇಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿರುವ ಕಲ್ಪನಾ ಸಿದ್ದರಾಜು ಅವರ ನಿವಾಸಕ್ಕೆ ಭೇಟಿ ನೀಡಿ ಅವರನ್ನ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ್ರು. ಈ ವೇಳೆ ಮಾತನಾಡಿದ  ಎಚ್ ಡಿಕೆ, ನನ್ನ ಸಹೋದರಿ ಕಲ್ಪನಾ ಮರಳಿ ಗೂಡಿಗೆ ಬಂದಿದ್ದಾಳೆ. ಕಲ್ಪನಾ ಬಂದಿದ್ದು ‌ಪಕ್ಷಕ್ಕೆ ಬಲ ಬಂದಿದ್ದು, ಮದ್ದೂರುನಲ್ಲಿ ಜೆಡಿಎಸ್ ಗೆಲುವು ಸುಲಭವಾಗಲಿದೆ . 
 
ಆಕೆಗೆ ಪಕ್ಷದಲ್ಲಿ ಗೌರವಾನ್ವಿತ ಸ್ಥಾನವನ್ನು ಕೊಟ್ಟು ರಾಜಕೀಯ ಬೆಳವಣಿಗೆಗೆ ಸಹಕಾರ ಮಾಡಲಿದೆ ಎಂದು ಎಂದು ಹೇಳಿದ್ರು. ಇನ್ನು ಪಕ್ಷ ಸೇರ್ಪಡೆ ನಂತ್ರ ಮಾತನಾಡಿದ ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು, ಕಾಂಗ್ರೆಸ್ ನನಗೆ ಮೋಸ ಮಾಡಿದೆ. ಕೆಲವು ಕಾಣದ ಕೈಗಳು ನನಗೆ ಟಿಕಟ್ ತಪ್ಪಿಸುವಲ್ಲಿ ಸಫಲರಾಗಿದ್ದಾರೆ ಎಂದು ಪರೋಕ್ಷವಾಗಿ ಚೆಲುವರಾಯಸ್ವಾಮಿ ವಿರುದ್ದ ಹರಿಹಾಯ್ದರು.
 
 ಜೆಡಿಎಸ್ ನಮ್ಮ ತವರು ಪಕ್ಷ ಹಿಂದೆ ನನ್ನ ಪತಿ ಜೆಡಿಎಸ್ ಪಕ್ಷದಿಂದ ಶಾಸಕರಾಗಿದ್ರು ನಾನು ಕೂಡ ಜೆಡಿಎಸ್ ನಿಂದಲೆ ಶಾಸಕಿಯಾಗಿದ್ದೆ. ದೇವೆಗೌಡ್ರು ಹಾಗೂ ಕುಮಾರಸ್ವಾಮಿ ಮೇಲೆ ಗೌರವವಿದೆ. ಇನ್ಮುಂದೆ  ಜೆಡಿಎಸ್ ಪಕ್ಷದ ಗೆಲುವುವಿಗಾಗಿ ದುಡಿಯುವೇ ಎಂದು ತಿಳಿಸಿದ್ದಾರೆ.‌‌

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments