Webdunia - Bharat's app for daily news and videos

Install App

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್

Webdunia
ಮಂಗಳವಾರ, 8 ಮೇ 2018 (06:42 IST)
ಬೆಂಗಳೂರು : ಕಳೆದ 4 ವರ್ಷಗಳಿಂದ ಮೋದಿಯವರು ಕಾಂಗ್ರೆಸ್ ಸರ್ಕಾರವನ್ನ ತೆಗಳುವ ಕೆಲಸ ಬಿಟ್ರೆ ಬೇರೆನೂ ಮಾಡಿಲ್ಲ. ದೇಶದ ಕೃಷಿ ಬೆಳವಣಿಗೆಗೆ ಒತ್ತು ನೀಡದೇ ಇರುವುದರಿಂದ ಆ ಕ್ಷೇತ್ರದ ಬೆಳವಣಿಗೆ ಹಿನ್ನೆಡೆ ಕಂಡಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು,’ ಆರ್ಥಿಕ ನೀತಿಗಳು ಸಾಮಾನ್ಯ ಜನರ ಮೇಲೆ ಹೆಚ್ಚು ಪರಿಣಾಮಗಳನ್ನು ಬೀರುತ್ತದೆ. ಕೇಂದ್ರದ ನೋಟು ನಿಷೇಧ ಮತ್ತು ಜಿಎಸ್‍ಟಿ ಅನುಷ್ಠಾನದಲ್ಲಿ ಆಗಿರುವ ನ್ಯೂನತೆಗಳಿಂದ ಜನರು ಹೆಚ್ಚು ಸಮಸ್ಯೆಗೀಡಾಗಿದ್ದಾರೆ. ಸಾವಿರಾರು ಮಂದಿ ನಿರುದ್ಯೋಗಿಗಳಾಗಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರದಿಂದ ಮಧ್ಯಮ ಮತ್ತು ಸಣ್ಣ ಮಧ್ಯಮ ಕೈಗಾರಿಕೆಗಳು ಅವನತಿಯತ್ತ ಹೋಗಿವೆ’ ಎಂದು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಬೆಂಗಳೂರಿನಲ್ಲಿ ಯುವಕರ ಸಂಖ್ಯೆ ಜಾಸ್ತಿ ಇದೆ, ದೇಶದ ಸ್ಟಾರ್ಟ್ ಅಪ್ ಕ್ಯಾಪಿಟಲ್. ಟೆಂಡರ್ ಶ್ಯೂರ್ ರಸ್ತೆಗಳು ಪ್ರಪಂಚದಲ್ಲಿಯೇ ಹೆಸರು ಮಾಡಿದೆ. ಮೆಟ್ರೊಗಾಗಿ ಹೆಚ್ಚಿನ ಅನುದಾನವನ್ನ ರಾಜ್ಯ ಸರ್ಕಾರ ನೀಡಿದೆ. ಸಿದ್ದರಾಮಯ್ಯ ಸರ್ಕಾರ ಸಾಕಷ್ಟು ಕೈಗಾರಿಕೆಗಳು ಬೆಂಗಳೂರಿನಲ್ಲಿ ಸ್ಥಾಪನೆಯಾಗಲು ಒತ್ತು ನೀಡಿದೆ. ಗುಜರಾತ್‍ಗಿಂತ ಕೈಗಾರಿಕೆಗಳ ಸ್ಥಾಪನೆಯಲ್ಲಿ ಕರ್ನಾಟಕ ಮುಂದೆ ಇದೆ. ಉದ್ಯೋಗ ಸೃಷ್ಟಿಯಲ್ಲೂ ಸಹ ದೇಶಕ್ಕೆ ಬೆಂಗಳೂರು ಮಾದರಿಯಾಗಿದೆ. ನಾವು ಮಾಡಿರುವ ಒಳ್ಳೆಯ ಕೆಲಸಗಳು ಬಿಜೆಪಿಯವರ ಕಣ್ಣಿಗೆ ಕಂಡಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments