Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಕೊರೊನಾ ನಿಯಮಗಳಲ್ಲಿ ಮತ್ತಷ್ಟು ರಿಲೀಫ್ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಇಂದು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ವರ್ಚುವಲ್ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಲಾಕ್ಡೌನ್ ಇಲ್ಲ. ಶುಕ್ರವಾರ ಸಭೆ ನಡೆಸಿ ಮತ್ತೆ ವೀಕೆಂಡ್ ಲಾಕ್ಡೌನ್ ಬಗ್ಗೆ ಚರ್ಚೆ ಮಾಡುತ್ತೇವೆ. ನಾವು ಡಬ್ಲ್ಯೂಎಚ್ಒ, ತಜ್ಞರ ಸಮಿತಿ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ.
ಸೋಂಕು ಲಕ್ಷಣಗಳು ಕಡಿಮೆ ಆದ ತಕ್ಷಣ ಇರುವ ನಿಯಮಗಳನ್ನು ಸಡಿಲಿಕೆ ಮಾಡುತ್ತೇವೆ ಎಂದರು. ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆದಿದೆ. ಬಂದಿದ್ದ ಎಲ್ಲಾ ತಜ್ಞರು ವ್ಯಾಕ್ಸಿನೇಷನ್ ಹಾಗೂ ಟೆಸ್ಟಿಂಗ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.