Publish Date: Sat, 22 Sep 2018 (08:57 IST)
Updated Date: Sat, 22 Sep 2018 (08:59 IST)
ನವದೆಹಲಿ: ಗೋವಾ ಸಿಎಂ ಪರಿಕ್ಕರ್ ಇದೀಗ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಿದ್ದರೂ ಪರಿಕ್ಕರ್ ಮೇಲೆ ಹೊಸದೊಂದು ಆರೋಪವನ್ನು ಗೋವಾ ಕಾಂಗ್ರೆಸ್ ಮಾಡಿದೆ.
ಆಸ್ಪತ್ರೆಯ ತಮ್ಮ ಕೊಠಡಿಯಲ್ಲಿ ಕುಳಿತುಕೊಂಡೇ ಸಿಎಂ ಪರಿಕ್ಕರ್ ಕೆಲವರಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಗೋವಾ ಕಾಂಗ್ರೆಸ್ ನಾಯಕ ಎ ಚೆಲ್ಲಕುಮಾರ್ ಆರೋಪಿಸಿದ್ದಾರೆ.
ಅಷ್ಟೇ ಅಲ್ಲದೆ, ಗೋವಾ ಸಿಎಂ ಇದಕ್ಕೂ ಮೊದಲು ವಿದೇಶದಲ್ಲೂ ಚಿಕಿತ್ಸೆ ಪಡೆದಿದ್ದರು. ಈಗ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಸ್ಥಿತಿ ಗತಿ ಏನು ಎಂಬ ಬಗ್ಗೆ ವೈದ್ಯರು ಅಧಿಕೃತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿ ಎಂದು ಅವರು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.