Webdunia - Bharat's app for daily news and videos

Install App

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ

Webdunia
ಬುಧವಾರ, 6 ಸೆಪ್ಟಂಬರ್ 2023 (07:49 IST)
ಬೆಂಗಳೂರು : ನಮ್ಮ ಮೆಟ್ರೋ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿಯೊಂದನ್ನು ಬೆಂಗಳೂರು ಆಟೋ ರಿಕ್ಷಾ ಚಾಲಕರ ಒಕ್ಕೂಟ ನೀಡಿದೆ. ನಿಲ್ದಾಣದಿಂದ ಹೊರ ಬಂದ್ಮೇಲೆ ಕರೆದಲ್ಲಿ ಆಟೋ ಚಾಲಕರು ಬರುವುದಿಲ್ಲ. ಸಮಸ್ಯೆಗಳೇ ಹೆಚ್ಚಾಗಿದೆ ಎನ್ನುತ್ತಿದ್ದ ಬೆಂಗಳೂರಿಗರಿಗೆ ಒಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಮೆಟ್ರೋ ನಿಲ್ದಾಣಗಳಿಂದ ನಾವು ತಲುಪುವ ಸ್ಥಳಗಳಿಗೆ ಹೋಗಲು ಸಮಸ್ಯೆಯಾಗುತ್ತಿದೆ. ಆಟೋ ಚಾಲಕರು ನಾವು ಕರೆದ ಕಡೆ ಬರಲ್ಲ. ಹೆಚ್ಚಿಗೆ ಹಣ ಪೀಕುತ್ತಿದ್ದಾರೆ ಎನ್ನುವುದು ಮೆಟ್ರೋ ಪ್ರಯಾಣಿಕರ ದೂರುಗಳಾಗಿತ್ತು. ಇದಕ್ಕೆ ಸ್ವತಃ ಆಟೋ ಚಾಲಕರೇ ಪರಿಹಾರವನ್ನ ಒದಗಿಸುತ್ತಿದ್ದಾರೆ. ಅದೇ ಈ ‘ಮೆಟ್ರೋ ಮಿತ್ರ’ ಅಪ್ಲಿಕೇಷನ್.

ಇದರ ಮೂಲಕ ಕೊನೆಯ ಮೆಟ್ರೋ ನಿಲ್ದಾಣ/ಸ್ಥಳಗಳಿಗೂ ಸಂಪರ್ಕ ಕಲ್ಪಿಸುತ್ತವೆ. ‘ನಮ್ಮ ಯಾತ್ರಿ’ ಆನ್ಲೈನ್ ಆಟೋ ರಿಕ್ಷಾ ಬುಕ್ಕಿಂಗ್ ಅಪ್ಲಿಕೇಶನ್ ಈಗಾಗಲೇ ಯಶಸ್ವಿಯಾಗಿದೆ. ಇದಾದ ಬಳಿಕ ‘ಮೆಟ್ರೋ ಮಿತ್ರ’ ಆ್ಯಪ್ ಅನ್ನು ವಿವಿಧ ಪ್ರದೇಶಗಳಿಗೆ ಮತ್ತು ಮೆಟ್ರೋ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸಲೆಂದೇ ರಚನೆ ಮಾಡಲಾಗಿದೆ. ಈ ಆಪ್ ಬುಧವಾರ ಲೋಕಾರ್ಪಣೆಗೊಳ್ಳುವ ಮೂಲಕ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.

ರಾಜ್ಯ ಸರ್ಕಾರ ನಿಗದಿಪಡಿಸಿರುವ ಮೀಟರ್ ದರದ ಜೊತೆಗೆ 10 ರೂಪಾಯಿ ಹೆಚ್ಚುವರಿ ಹಣವನ್ನು ತಂತ್ರಜ್ಞಾನ ನಿರ್ವಹಣೆಗೆ ವಿಧಿಸಲಾಗಿದೆ ಎಂದು ಯೂನಿಯನ್ ತಿಳಿಸಿದೆ. ಇದೇ ಬುಧವಾರ ಜಯನಗರ ಮೆಟ್ರೋ ನಿಲ್ದಾಣದಲ್ಲಿ ಅಧಿಕೃತ ಆ್ಯಪ್ ಅನಾವರಣವಾಗಲಿದೆ. ಮೆಟ್ರೋ ಮಿತ್ರವು ಮೆಟ್ರೋ ಬಳಕೆದಾರರಿಗೆ ಮಾತ್ರ. ಸದ್ಯ ಜಯನಗರ ಮತ್ತು ಆರ್ವಿ ರಸ್ತೆ ನಿಲ್ದಾಣಗಳಲ್ಲಿ ಮೆಟ್ರೋ ಮಿತ್ರ ಪ್ರಾಯೋಗಿಕ ಪರೀಕ್ಷೆ ನಡೆಸಲಾಗುತ್ತೆ ಎಂದು ‘ಪಬ್ಲಿಕ್ ಟಿವಿ’ಗೆ ಎಆರ್ಡಿಯು ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

ಮುಂದಿನ ಸುದ್ದಿ
Show comments