Webdunia - Bharat's app for daily news and videos

Install App

ಜಿಲ್ಲೆಯಾದ್ಯಂತ ಭಾರೀ ಮಳೆ!

Webdunia
ಶುಕ್ರವಾರ, 1 ಜುಲೈ 2022 (09:27 IST)
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೇ ಭಾರೀ ಮಳೆಯಾಗಿದ್ದು, ಮಂಗಳೂರು ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
 
ಮಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ದೇರೆಬೈಲ್, ಮಾಲೆಮಾರ್, ಜನವಸತಿ ಪ್ರದೇಶಕ್ಕೆ ರಾಜಕಾಲುವೆಯ ನೀರು ನುಗ್ಗಿದ್ದು ಹಲವು ಮನೆಯೊಳಗೂ ನೀರು ನುಗ್ಗಿದೆ.

ರಸ್ತೆಯಲ್ಲಿ ನಿಂತಿರುವ ನೀರು, ವಾಹನ ಸವಾರರ ಪರದಾಟ ನಡೆಸಿದ್ದಾರೆ. ಮನೆಯೊಳಗಿರುವ ಸಾಮಾಗ್ರಿಗಳು ನೀರಿನಲ್ಲಿ ಮುಳುಗಿದ್ದು, ಜನ ಪಾಲಿಕೆ ಅಧಿಕಾರಿ ಹಾಗೂ ಜನಪ್ರತಿನಿಧಿಗಳಿಗೆ ಹಿಡಿ ಶಾಪ ಹಾಕಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ಬಂಟ್ವಾಳ, ಪುತ್ತೂರು, ಸುಳ್ಯ ಬೆಳ್ತಂಗಡಿ ತಾಲೂಕಿನಲ್ಲೂ ಭಾರೀ ಮಳೆ ಆಗಿದೆ. ಈ ಮೊದಲೇ ಜಿಲ್ಲಾಡಳಿತವು ಜಿಲ್ಲೆಯಲ್ಲಿ ದಟ್ಟ ಕಾರ್ಮೋಡ ಮುಸುಕಿದ ವಾತಾವರಣದ ಜೊತೆ ಮಳೆ ಆಗಲಿದೆ.

ಇಂದು ಪೂರ್ತಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಸಮುದ್ರ, ನದಿ ಪಾತ್ರದ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿತ್ತು. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗರ್ಲ್ ಫ್ರೆಂಡ್ ಜೊತೆ ಸುಮ್ನೆ ಸಿನಿಮಾ ನೋಡೋದು ಬಿಟ್ಟು ಈ ಕೆಲಸ ಮಾಡಿದ್ದಕ್ಕೆ ಯುವಕನಿಗೆ ಥಿಯೇಟರ್ ನಲ್ಲಿ ಬಿತ್ತು ಗೂಸಾ Video

Karnataka Weather:ರಾಜ್ಯದಲ್ಲಿ ಈ ವಾರ ಎಲ್ಲೆಲ್ಲಿ ಮಳೆಯಾಗಲಿದೆ, ಇಲ್ಲಿದೆ ವಾರದ ಹವಾಮಾನ ವರದಿ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಮುಂದಿನ ಸುದ್ದಿ
Show comments