Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಹೈಕೋರ್ಟ್ ಆದೇಶದ ಬೆನ್ನಲ್ಲೇ ನಾಳೆಯಿಂದ ರಾಜ್ಯಾದ್ಯಂತ ಪ್ರೌಢ ಶಾಲೆಗಳು ಆರಂಭವಾಗ್ತಿದೆ.
ಶಾಲೆಗಳಿಗೆ ಭದ್ರತೆ ಒದಗಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಶಾಲೆ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿ, ನಾಳೆಯಿಂದ ಶಾಂತಿಯುತವಾಗಿ ಎಲ್ಲಾ ತರಗತಿ ನಡೆಯುತ್ತೆ.
ಕಾಲೇಜುಗಳ ಆರಂಭದ ಬಗ್ಗೆ ನಿರ್ಧರಿಸುತ್ತೇವೆ ಅಂದಿದ್ದಾರೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾತಾಡಿ, ನಾಳೆ 9-10ನೇ ಕ್ಲಾಸ್ ಆರಂಭವಾಗುತ್ತೆ. ನಾಳೆ ಸಿಎಂ ಸಭೆ ಬಳಿಕ ಪಿಯುಸಿ, ಡಿಗ್ರಿ ಕಾಲೇಜ್ ಓಪನ್ ಬಗ್ಗೆ ಚರ್ಚೆ ಮಾಡ್ತೇವೆ ಅಂದ್ರು.
ಕಾಂಗ್ರೆಸ್ನಲ್ಲಿ ಇಂಥ ಹೇಳಿಕೆ ಕೊಟ್ರೆ 10 ನಿಮಿಷದಲ್ಲಿ ರಾಜೀನಾಮೆ ಪಡೀತಿದ್ದೆವು. ಸಿಎಂ ಬೊಮ್ಮಾಯಿ ಬಾಯಿಗೆ ಹೊಲಿಗೆ ಹಾಕಿಕೊಂಡಿದ್ದಾರೆ. ಈಶ್ವರಪ್ಪ ವಿರುದ್ಧ ದೇಶದ್ರೋಹ ಕೇಸ್ ದಾಖಲಾಗಬೇಕು ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡ್ತೇವೆ ಅಂತ ಡಿಕೆಶಿ ಕಿಡಿಕಾರಿದ್ದಾರೆ.