Publish Date: Wed, 10 May 2023 (12:55 IST)
Updated Date: Wed, 10 May 2023 (12:45 IST)
ಬೆಂಗಳೂರು : ಇವಿಎಂನಲ್ಲಿ ದೋಷ ಕಂಡುಬರಲ್ಲ. ಆ ರೀತಿ ಏನಾದ್ರು ದೋಷ ಕಂಡು ಬಂದರೆ ಕೂಡಲೇ ನಾವು ಬದಲಾವಣೆ ಮಾಡುತ್ತೇವೆ ಎಂದು ಬೆಂಗಳೂರು ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು.
ಮೇ 10ಕ್ಕೆ ನಡೆಯಲಿರುವ ಚುನಾವಣೆ ಸಿದ್ಧತೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 8,802 ಮತಗಟ್ಟೆಗಳಿಗೆ ಮಂಗಳವಾರ ಸಿಬ್ಬಂದಿ ತೆರಳಲಿದ್ದಾರೆ.
42 ಸಾವಿರ ಸಿಬ್ಬಂದಿಯನ್ನು ಚುನಾವಣಾ ಕೆಲಸಕ್ಕೆ ನಿಯೋಜನೆ ಮಾಡಿದ್ದೇವೆ. ಮಸ್ಟರಿಂಗ್ ಸೆಂಟರ್ನಲ್ಲಿ ತಿಂಡಿ, ಊಟದ ವ್ಯವಸ್ಥೆ ಮಾಡಿದ್ದೇವೆ. ನಿಯೋಜಿತ ಸಿಬ್ಬಂದಿ ಆಯಾ ಮಸ್ಟರಿಂಗ್ ಸೆಂಟರ್ಗಳಲ್ಲಿ ಇವಿಎಂ ಪಡೆದು ಇಂದು ಸಂಜೆ ವೇಳೆಗೆ ಮತಗಟ್ಟೆಗೆ ತೆರಳುತ್ತಾರೆ. ನಾವು ಈಗಾಗ್ಲೇ ರೂಟ್ ಮ್ಯಾಪ್ ಫಿಕ್ಸ್ ಮಾಡಿದ್ದೇವೆ ಎಂದು ತಿಳಿಸಿದರು.