ಮನೆಗಳಿಗೆ ನೀರು ನುಗ್ಗಿದ್ದರೆ ತಕ್ಷಣ ಪರಿಹಾರ!

Webdunia
ಮಂಗಳವಾರ, 23 ನವೆಂಬರ್ 2021 (16:48 IST)
ಕೋಲಾರ :  ಅಕಾಲಿಕ ಮಳೆಯಿಂದ  ಅಪಾರ ಆಸ್ತಿಪಾಸ್ತಿ, ಬೆಳೆ ನಷ್ಟಕ್ಕೊಳಗಾಗಿರುವ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಬೆಳೆ ಹಾನಿ ಪರಿಶೀಲಿಸಿದರು.
ರೈತರ ಜಮೀನುಗಳಿಗೆ ತೆರಳಿ ಪರಿಶೀಲನೆ ನಡೆಸಿದ ಅವರು ಮಳೆಯಿಂದಾಗಿ ತುಂಬಿದ, ಕಟ್ಟೆಯೊಡೆದ ಕೆರೆಗಳನ್ನೂ ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿ, ಹಾಳಾದ ಕೆರೆ ಏರಿ ದುರಸ್ತಿಗೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು, ಮನೆಗಳಿಗೆ ನೀರು ನುಗ್ಗಿದ್ದರೆ ತಕ್ಷಣ 10 ಸಾವಿರ ರುಪಾಯಿ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದರು. ಮಳೆಯಿಂದಾಗಿ ತೀವ್ರ ಹಾನಿಗೊಳಗಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಗೆ ಭಾನುವಾರ ಭೇಟಿ ನೀಡಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಈಗ ಕೋಲಾರ ತಾಲೂಕಿನ ನರಸಾಪುರ ಸುತ್ತಮುತ್ತ ಹಾಗೂ ಮುದುವಾಡಿ ಸಮೀಪ ಪರಿಶೀಲನೆ ನಡೆಸಿದರು.
ರೈತರ ಹೊಲಕ್ಕೆ ಬಳಿ ತೆರಳಿ ಹಾನಿ ಕುರಿತು ಮಾಹಿತಿ ವಿವರಣೆ ಪಡೆದುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆರೆ ಏರಿ ದುರಸ್ತಿ, ಕಡಿತಗೊಂಡ ವಿದ್ಯುತ್ ದುರಸ್ತಿಗೆ ಸಂಬಂಧಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಮಳೆ ಹಾನಿ ಪ್ರದೇಶಗಳ ಸಂಪೂರ್ಣ ವೀಕ್ಷಣೆ ಬಳಿಕ ಪರಿಹಾರ ಮೊತ್ತದ ಬಗ್ಗೆ ತಿಳಿಸಿ ಭರವಸೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳಾ ಮೀಸಲಾತಿ ಜಾರಿಗೊಳಿಸಿದ ಮೋದಿ ಮಾಸ್ಟರ್ ಪ್ಲ್ಯಾನ್ ಏನಿತ್ತು ಎಂದು ರಿವೀಲ್ ಮಾಡಿದ ಬಿಜೆಪಿ

ಹೈದರಾಬಾದ್ ಟು ಹುಬ್ಬಳ್ಳಿ ವಿಮಾನದಲ್ಲಿ ನಿಜಕ್ಕೂ ಆಗಿದ್ದೇನು, ದುರಂತ ತಪ್ಪಿದ್ದು ಹೇಗೆ Video

ಜನಗಣತಿ ಬಳಿಕ ಬೇಕಿದ್ದರೆ ಕ್ಷೇತ್ರ ಮರುವಿಂಗಡಣೆ ಮಾಡಲಿ: ಸಿಎಂ ಸಿದ್ದರಾಮಯ್ಯ

ಉದ್ಯೋಗ ಮೇಳದಿಂದ ಯುವಕರಿಗೆ ಅನುಕೂಲ: ಡಾ. ಸಿ.ಎನ್. ಅಶ್ವತ್ಥನಾರಾಯಣ್

ಎನ್ ಎ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments