ಭಾರತದಲ್ಲಿ ಕೊರೋನಾ ನಿಯಂತ್ರಣದಲ್ಲಿದೆಯೇ?

Webdunia
ಮಂಗಳವಾರ, 19 ಏಪ್ರಿಲ್ 2022 (09:29 IST)
ನವದೆಹಲಿ : ಕೆಲ ರಾಜ್ಯಗಳಲ್ಲಿ ಕೊರೋನಾ ಏರಿಕೆಯಾಗುತ್ತಿದೆ ಅನ್ನೋ ಆತಂಕದ ನಡುವೆಯೂ ಭಾರತದಲ್ಲಿ ಕೊರೋನಾ ಪ್ರಕರಣ ಅತೀ ಕಡಿಮೆಯಾಗಿದೆಯಾ ನಿಯಂತ್ರಣದಲ್ಲಿದೆ ಅನ್ನೋ ವರದಿ ಭಾರಿ ಚರ್ಚೆಗೆ ಗ್ರಾಸವಾಗುತ್ತಿದೆ.

ಅಂಕಿ ಅಂಶಗಳು ಪ್ರಕಾರ ಭಾರತದಲ್ಲಿ ಕೊರೋನಾ ಪ್ರಕರಣ ಗಣನೀವಾಗಿ ಹೆಚ್ಚಳವಾಗಿದೆ. ಕೋವಿಡ್ ಟೆಸ್ಟ್, ಪಾಸಿಟಿವಿಟಿ ರೇಟ್ ಈ ಪ್ರಶ್ನೆಗೆ ಉತ್ತರ ನೀಡುತ್ತಿದೆ.

ದೆಹಲಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಪಾಸಿಟಿವಿಟಿ ರೇಟ್ ಶೇಕಡಾ 5ಕ್ಕಿಂತ ಮಿಗಿಲಾಗಿದೆ. ಆದರೆ ಭಾರತದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣ ಅತೀ ಕಡಿಮೆ ಇದೆ ಎಂದು ವರದಿಗಳು ಹೇಳುತ್ತಿದೆ.

ಆದರೆ ಕೊರೋನಾ ಪರೀಕ್ಷೆಯನ್ನು ಗಣನೀಯವಾಗಿ ಕಡಿತಗೊಳಿಸಲಾಗಿದೆ. ಹೀಗಾಗಿ ಪ್ರಕರಣಗಳ ಸಂಖ್ಯೆಯೂ ಕಡಿಮೆ ಆಗಿದೆ. ಆದರೆ ನೈಜ ಅಂಕಿ ಅಂಶ ಇಲ್ಲಿವೆ.

ಮಾರ್ಚ್ ತಿಂಗಳ ಕೋವಿಡ್ ಪರೀಕ್ಷೆ ಹಾಗೂ ಏಪ್ರಿಲ್ ತಿಂಗಳ ಕೋವಿಡ್ ಪರೀಕ್ಷೆ ಅಂಕಿ ಅಂಶ ಹಾಗೂ ಪಾಸಿಟಿವಿಟಿ ರೇಟ್ ಭಾರತದ ಕೊರೋನಾ ಪ್ರಕರಣದ ನೈಜ ಕತೆ ಬಿಚ್ಚಿಡುತ್ತಿದೆ.

ದೆಹಲಿಯಲ್ಲಿ 2022ರ ಮಾರ್ಚ್ 16ರಂದು 36,625 ಕೊರೋನಾ ಟೆಸ್ಟ್ ಮಾಡಿಸಲಾಗಿತ್ತು. ಈ ವೇಳೆ ಪತ್ತೆಯಾದ ಕೊರೋನಾ ಪಾಸಿಟಿವಿಟಿ ರೇಟ್ ಶೇಕಡಾ 0.4 ಮಾತ್ರ. ಇನ್ನು ಏಪ್ರಿಲ್ 16 ರಂದು ದೆಹಲಿಯಲ್ಲಿ 8,646 ಕೋವಿಡ್ ಟೆಸ್ಟ್ ಮಾಡಿಸಲಾಗಿದೆ. ಈ ಅತ್ಯಲ್ಪ ಕೋವಿಡ್ ಟೆಸ್ಟ್ನಲ್ಲೇ ದೆಹಲಿಯಲ್ಲಿ ಇದೀಗ ಕೋವಿಡ್ ಪಾಸಿಟಿವಿಟಿ ರೇಟ್ ಶೇಕಡಾ 5.3 ರಷ್ಟಿದೆ.

ಮಹಾರಾಷ್ಟ್ರದಲ್ಲಿ ಮಾರ್ಚ್ 16ರಂದು 56,574 ಕೋವಿಡ್ ಟೆಸ್ಟ್ ಮಾಡಿಸಲಾಗಿದೆ. ಈ ವೇಳೆ ಶೇಕಡಾ 0.4 ರಷ್ಟು ಕೋವಿಡ್ ಪಾಸಿಟಿವಿಟಿ ರೇಟ್ ಪತ್ತೆಯಾಗಿದೆ. ಇನ್ನು ಏಪ್ರಿಲ್ 16 ರಂದು ಮಹಾರಾಷ್ಟ್ರದಲ್ಲಿ ಕೇವಲ 19,518 ಕೋವಿಡ್ ಟೆಸ್ಟ್ ಮಾಡಿಸಲಾಗಿದೆ. ಆದರೆ ಪಾಸಿಟಿವಿಟಿ ರೇಟ್ ಶೇಕಡಾ 0.5ಕ್ಕೆ ಏರಿಕೆಯಾಗಿದೆ.

ಕೇರಳದಲ್ಲಿ ಮಾರ್ಚ್ 16 ರಂದು 25,946 ಕೋವಿಡ್ ಟೆಸ್ಟ್ ಮಾಡಿಸಲಾಗಿದೆ. ಈ ವೇಳೆ ಶೇಕಡಾ 3.7 ರಷ್ಟು ಕೋವಿಡ್ ಪಾಸಿಟಿವಿಟಿ ಪತ್ತೆಯಾಗಿದೆ. ಆದರೆ ಏಪ್ರಿಲ್ 16 ರಂದು ಕೇವಲ 10,673 ಕೋವಿಡ್ ಟೆಸ್ಟ್ ಮಾಡಿಸಲಾಗಿದೆ. ಈ ಕಡಿಮೆ ಟೆಸ್ಟ್ನಲ್ಲಿ ಶೇಕಡಾ 2.1 ರಷ್ಟು ಕೋವಿಡ್ ಪಾಸಿಟಿವಿಟಿ ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments