ಜಾರಕಿಹೊಳಿ ಸಹೋದರರು ಹೇಳುತ್ತಿರುವುದು ಒಂದು ಒಳಗಿನ ಲೆಕ್ಕಾಚಾರವೇ ಇನ್ನೊಂದು

Webdunia
ಮಂಗಳವಾರ, 18 ಸೆಪ್ಟಂಬರ್ 2018 (08:43 IST)
ಬೆಂಗಳೂರು: ಬೆಳಗಾವಿ ಕಾಂಗ್ರೆಸ್ ನ ಪ್ರಬಲ ನಾಯಕರಾದ ಜಾರಕಿಹೊಳಿ ಸಹೋದರರು ತಾವು ಬಿಜೆಪಿ ಸೇರುತ್ತಿಲ್ಲ, ಸಮ್ಮಿಶ್ರ ಸರ್ಕಾರಕ್ಕೆ ಅಪಾಯ ತರಲ್ಲ ಎಂದು ಹೊರಗೆ ಹೇಳಿಕೊಳ್ಳುತ್ತಿದ್ದರೂ ಒಳಗೊಳಗೇ ಬಂಡಾಯಕ್ಕೆ ಭಾರೀ ಸಿದ್ಧತೆಯನ್ನೇ ಮಾಡಿಕೊಂಡಿದ್ದಾರೆ.

ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ವೇಳೆ ರಮೇಶ್ ಜಾರಕಿಹೊಳಿ ತಮ್ಮ ಸಮಸ್ಯೆ ಬಗೆಹರಿಸಲು ಸ್ವತಃ ರಾಹುಲ್ ಗಾಂಧಿಯವರೇ ಮಧ್ಯಪ್ರವೇಶಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ ತಮ್ಮ ಬೆಂಬಲಿತ 18 ಶಾಸಕರ ರಾಜೀನಾಮೆ ಬಗ್ಗೆಯೂ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಹಾಗಿದ್ದರೂ ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಸಿದ್ದರಾಮಯ್ಯ ಅವರಿಗೆ ವಿಶ್ ಮಾಡಲು ಹೋಗಿದ್ದೆ ಅಷ್ಟೆ. ನಾನು ಯಾರ ಜತೆಯಲ್ಲೂ ಪ್ರತ್ಯೇಕ ಸಭೆ ನಡೆಸಿಲ್ಲ ಎಂದಿದ್ದಾರೆ. ಈ ನಡುವೆ ಇಂದು ರಾಜ್ಯ ನಾಯಕರು ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾಗಲಿದ್ದು, ಈ ವೇಳೆ ರಾಜ್ಯದ ವಿದ್ಯಮಾನಗಳ ಬಗ್ಗೆ ವರದಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಜಾರಕಿಹೊಳಿ ಸಹೋದರರಿಗೂ ಬುಲಾವ್ ನೀಡುವ ಸಾಧ್ಯೆತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮಹತ್ವದ ಕಾರಣಕ್ಕೆ ಕುಮಾರಸ್ವಾಮಿ ಭೇಟಿಯಾದ ಬಿವೈ ವಿಜಯೇಂದ್ರ

ದಾಂಪತ್ಯ ಜೀವನಕ್ಕೆ ಕಾಲಿಡುವ ಮೊದಲು ಪುರುಷರು ತಿಳಿದುಕೊಳ್ಳಲೇಬೇಕಾದ ರಹಸ್ಯಗಳು

ಎಲ್ಲೆಲ್ಲೂ ಹಾವು.. ಎಲ್ಲಾ ಪ್ರವಾಹದ ಇಫೆಕ್ಟ್, ಜನರು ಕಂಗಾಲು Video

ಕರ್ನಾಟಕದ ಖಾಯಂ ನಿವಾಸಿ ಪ್ರಮಾಣಪತ್ರಕ್ಕೆ ಬ್ರೇಕ್ ಹಾಕಿ: ಅಮಿತ್ ಶಾಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments