Webdunia - Bharat's app for daily news and videos

Install App

ಇಂದಿನಿಂದ ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ: ರೈತರ ಸಾಲಮನ್ನಾ ಖಚಿತ

Webdunia
ಸೋಮವಾರ, 2 ಜುಲೈ 2018 (08:58 IST)
ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬಂದ ಮೇಲೆ ಇಂದಿನಿಂದ ಮೊದಲ ಬಾರಿಗೆ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಸಿಎಂ ಕುಮಾರಸ್ವಾಮಿ ಹೊಸ ಬಜೆಟ್ ಮಂಡಿಸಲಿದ್ದಾರೆ.

ಅಧಿವೇಶನಕ್ಕೆ ಮೊದಲು ರಾಜ್ಯಪಾಲ ವಜುಬಾಯಿ ವಾಲಾರಿಂದ ಭಾಷಣ ನಡೆಯಲಿದೆ. ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲರು ಜಂಟಿ ಸದನವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಸಮ್ಮಿಶ್ರ ಸರ್ಕಾರಕ್ಕಿರುವ ಮೊದಲ ಸವಾಲು ಎಂದರೆ ಬಜೆಟ್ ಮಂಡನೆ. ಆದರೆ ನಿನ್ನೆ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಬಜೆಟ್ ನಲ್ಲಿ ರೈತರ ಸಾಲಮನ್ನಾ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಹೀಗಾಗಿ ಕಾಂಗ್ರೆಸ್-ಜೆಡಿಎಸ್ ಎರಡೂ ಪಕ್ಷಗಳೂ ಒಗ್ಗೂಡಿ ಸದನ ಎದುರಿಸಲಿವೆ.

ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ್ ಗಳಲ್ಲಿರುವ ರೈತರ ಬೆಳೆ ಸಾಲಮನ್ನಾ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ. ಇದಲ್ಲದೆ, ನೀರಾವರಿ ಯೋಜನೆಗೆ 1.25 ಕೋಟಿ ರೂ., ಐದು ವರ್ಷದಲ್ಲಿ 20 ಲಕ್ಷ ಮನೆಗಳ ನಿರ್ಮಾಣ, 1 ಕೋಟಿ ಉದ್ಯೋಗ ಸೃಷ್ಟಿ, ಕ್ರೀಡಾಳುಗಳ ಪ್ರೋತ್ಸಾಹಕ್ಕೆ ಕ್ರೀಡಾ ನೀತಿ ರೂಪಿಸಲು ಸಮನ್ವಯ ಸಮಿತಿಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತಿತರರು ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments